<p><strong>ಬೆಂಗಳೂರು: </strong>ಪೆರೋಲ್ ಮೇಲೆ ತೆರಳಿ ಪುನಃ ಜೈಲಿಗೆ ಶರಣಾಗದೆ ನಾಪತ್ತೆಯಾಗಿರುವ ಕೈದಿಗಳ ಪತ್ತೆ ಕಾರ್ಯಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಥವಾ ಪೊಲೀಸ್ ಮಹಾ ನಿರೀಕ್ಷಕರ (ಐಜಿಪಿ) ಮೇಲುಸ್ತುವಾರಿಯಲ್ಲಿ ವಿಶೇಷ ತಂಡ ರಚಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ (ಡಿಜಿಪಿ) ಹೈಕೋರ್ಟ್ ನಿರ್ದೇಶಿಸಿದೆ.</p>.<p>ಈ ಕುರಿತಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಪ್ರಕರಣವನ್ನು ನ್ಯಾಯಮೂರ್ತಿ ಜಯಂತ್ ಪಟೇಲ್ ಹಾಗೂ ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರ ರಾವ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>‘ಪೆರೋಲ್ ಮೇಲೆ ತೆರಳಿ ಪರಾರಿಯಾಗಿರುವ ಕೈದಿಗಳ ಪತ್ತೆಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ವಿವರಗಳನ್ನು ಆಗಸ್ಟ್ 22ಕ್ಕೆ ಸಲ್ಲಿಸಿ’ ನ್ಯಾಯಪೀಠ ಸೂಚಿಸಿದೆ.</p>.<p>ವಿಚಾರಣೆ ವೇಳೆ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಪಿ.ಎಂ.ನವಾಜ್, ‘ರಾಜ್ಯದ ವಿವಿಧ ಜೈಲುಗಳಲ್ಲಿ ಪೆರೋಲ್ ಮೇಲೆ ತೆರಳಿ ಪರಾರಿಯಾಗಿರುವ ಕೈದಿಗಳ ಸಂಖ್ಯೆ 46ರಷ್ಟಿದೆ’ ಎಂದು ತಿಳಿಸಿದರು.</p>.<p>‘ಬೆಂಗಳೂರು ವ್ಯಾಪ್ತಿಯಲ್ಲಿ 14 ಕೈದಿಗಳನ್ನು ಸೆರೆ ಹಿಡಿಯಲಾಗಿದೆ. ಇಬ್ಬರು ಮೃತಪಟ್ಟಿದ್ದಾರೆ. ಉಳಿದ 26 ಕೈದಿಗಳನ್ನು ಪತ್ತೆ ಹಚ್ಚಬೇಕಿದೆ. ಈ ದಿಸೆಯಲ್ಲಿ ಗೃಹ ಇಲಾಖೆ ಎಲ್ಲ ಕ್ರಮ ಕೈಗೊಂಡಿದೆ. ಆದಾಗ್ಯೂ ಎಲ್ಲರ ಪತ್ತೆ ಕಾರ್ಯಕ್ಕೆ 12 ವಾರಗಳ ಕಾಲಾವಕಾಶ ಬೇಕು’ ಎಂದು ಕೋರಿದರು.</p>.<p>**</p>.<p><strong>ಷರತ್ತುಬದ್ಧ ಜಾಮೀನು</strong></p>.<p><strong>ಬೆಂಗಳೂರು: ಲಂ</strong>ಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಲೋಕಾಯುಕ್ತ ಕಚೇರಿಯ ಶೀಘ್ರ ಲಿಪಿಕಾರ ಸುಂಕಣ್ಣ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.</p>.<p>ಈ ಸಂಬಂಧ ಸುಂಕಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿತು.<br /> ‘ಈಗಾಗಲೇ ಪ್ರಕರಣದ ಸಹ ಆರೋಪಿಗೆ ಜಾಮೀನು ನೀಡಿರುವ ಕಾರಣ ಸುಂಕಣ್ಣ ಅವರಿಗೂ ಜಾಮೀನು ನೀಡಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿದೆ.</p>.<p>ಸುಂಕಣ್ಣ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ವಿರುದ್ಧ ದೂರು ದಾಖಲಿಸಿಕೊಂಡಿದ್ದು ಅವರು, 57 ದಿನಗಳಿಂದ ಜೈಲಿನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪೆರೋಲ್ ಮೇಲೆ ತೆರಳಿ ಪುನಃ ಜೈಲಿಗೆ ಶರಣಾಗದೆ ನಾಪತ್ತೆಯಾಗಿರುವ ಕೈದಿಗಳ ಪತ್ತೆ ಕಾರ್ಯಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಥವಾ ಪೊಲೀಸ್ ಮಹಾ ನಿರೀಕ್ಷಕರ (ಐಜಿಪಿ) ಮೇಲುಸ್ತುವಾರಿಯಲ್ಲಿ ವಿಶೇಷ ತಂಡ ರಚಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ (ಡಿಜಿಪಿ) ಹೈಕೋರ್ಟ್ ನಿರ್ದೇಶಿಸಿದೆ.</p>.<p>ಈ ಕುರಿತಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಪ್ರಕರಣವನ್ನು ನ್ಯಾಯಮೂರ್ತಿ ಜಯಂತ್ ಪಟೇಲ್ ಹಾಗೂ ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರ ರಾವ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.</p>.<p>‘ಪೆರೋಲ್ ಮೇಲೆ ತೆರಳಿ ಪರಾರಿಯಾಗಿರುವ ಕೈದಿಗಳ ಪತ್ತೆಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ವಿವರಗಳನ್ನು ಆಗಸ್ಟ್ 22ಕ್ಕೆ ಸಲ್ಲಿಸಿ’ ನ್ಯಾಯಪೀಠ ಸೂಚಿಸಿದೆ.</p>.<p>ವಿಚಾರಣೆ ವೇಳೆ ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್ ಪಿ.ಎಂ.ನವಾಜ್, ‘ರಾಜ್ಯದ ವಿವಿಧ ಜೈಲುಗಳಲ್ಲಿ ಪೆರೋಲ್ ಮೇಲೆ ತೆರಳಿ ಪರಾರಿಯಾಗಿರುವ ಕೈದಿಗಳ ಸಂಖ್ಯೆ 46ರಷ್ಟಿದೆ’ ಎಂದು ತಿಳಿಸಿದರು.</p>.<p>‘ಬೆಂಗಳೂರು ವ್ಯಾಪ್ತಿಯಲ್ಲಿ 14 ಕೈದಿಗಳನ್ನು ಸೆರೆ ಹಿಡಿಯಲಾಗಿದೆ. ಇಬ್ಬರು ಮೃತಪಟ್ಟಿದ್ದಾರೆ. ಉಳಿದ 26 ಕೈದಿಗಳನ್ನು ಪತ್ತೆ ಹಚ್ಚಬೇಕಿದೆ. ಈ ದಿಸೆಯಲ್ಲಿ ಗೃಹ ಇಲಾಖೆ ಎಲ್ಲ ಕ್ರಮ ಕೈಗೊಂಡಿದೆ. ಆದಾಗ್ಯೂ ಎಲ್ಲರ ಪತ್ತೆ ಕಾರ್ಯಕ್ಕೆ 12 ವಾರಗಳ ಕಾಲಾವಕಾಶ ಬೇಕು’ ಎಂದು ಕೋರಿದರು.</p>.<p>**</p>.<p><strong>ಷರತ್ತುಬದ್ಧ ಜಾಮೀನು</strong></p>.<p><strong>ಬೆಂಗಳೂರು: ಲಂ</strong>ಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಲೋಕಾಯುಕ್ತ ಕಚೇರಿಯ ಶೀಘ್ರ ಲಿಪಿಕಾರ ಸುಂಕಣ್ಣ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.</p>.<p>ಈ ಸಂಬಂಧ ಸುಂಕಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿತು.<br /> ‘ಈಗಾಗಲೇ ಪ್ರಕರಣದ ಸಹ ಆರೋಪಿಗೆ ಜಾಮೀನು ನೀಡಿರುವ ಕಾರಣ ಸುಂಕಣ್ಣ ಅವರಿಗೂ ಜಾಮೀನು ನೀಡಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿದೆ.</p>.<p>ಸುಂಕಣ್ಣ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ವಿರುದ್ಧ ದೂರು ದಾಖಲಿಸಿಕೊಂಡಿದ್ದು ಅವರು, 57 ದಿನಗಳಿಂದ ಜೈಲಿನಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>