<p><strong>ಬೆಳ್ತಂಗಡಿ:</strong> ಬೆಳ್ತಂಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಪ್ರಗತಿಯಲ್ಲಿದ್ದು , ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿದ ಕಾರಣದಿಂದ ಧರೆಯ ಮಣ್ಣು ಕುಸಿದು ಪಕ್ಕದ ಪೊಲೀಸ್ ಠಾಣೆಯ ಆವರಣ ಗೋಡೆ ಕುಸಿಯುವ ಭೀತಿ ಎದುರಾಗಿದೆ.</p>.<p>ಬೆಳ್ತಂಗಡಿ ತಾಲ್ಲೂಕು ಕಚೇರಿಯ ಶತಮಾನದಷ್ಟು ಹಳೆಯದಾದ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಬಸ್ ನಿಲ್ದಾಣದ ಕಾಮಗಾರಿ ನಡೆಯುತ್ತಿದೆ. ಬಸ್ ನಿಲ್ದಾಣದ ನಿಲುಗಡೆ ಪ್ರದೇಶಕ್ಕಾಗಿ 10 ರಿಂದ 15 ಅಡಿ ಆಳದಲ್ಲಿ ಮಣ್ಣು ತೆಗೆಯಲಾಗಿದೆ. ಇದರ ಸುತ್ತಲೂ ತಾಲ್ಲೂಕು ಕಛೇರಿ , ಪೋಲಿಸ್ ಠಾಣೆ , ನಾರಾಯಣ ಗುರು ವಾಣಿಜ್ಯ ಸಂಕೀರ್ಣ , ಗಿರಣಿ ಅಂಗಡಿ ಇದ್ದು, ಈಗ ಈ ಗುಂಡಿಯಲ್ಲಿ ಮಳೆ ನೀರು ನಿಂತು ಈಜುಕೊಳದಂತೆ ಬಾಸವಾಗುತ್ತಿದೆ.</p>.<p>ಮತ್ತೊಂದೆಡೆ ತಡೆಗೋಡೆ ನಿರ್ಮಾಣ ಕಾರ್ಯ ನಡೆದು ಮಣ್ಣು ತುಂಬಿಸಲಾಗಿದ್ದರೂ, ವಿಪರೀತ ಮಳೆಯಿಂದಾಗಿ ಪೊಲೀಸ್ ಠಾಣೆಯ ಭಾಗದಲ್ಲಿ ಮಣ್ಣು ಕುಸಿದಿದೆ. ಮಳೆ ಮುಂದುವರಿದರೆ ಇನ್ನಷ್ಟು ಮಣ್ಣು ಕುಸಿದು ಠಾಣೆಯ ಆವರಣ ಗೋಡೆ ಕುಸಿಯುವ ಸಾಧ್ಯತೆಯಿದೆ.</p>.<p>ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸಿರುವುದರಿಂದ ಭೂಕುಸಿತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ:</strong> ಬೆಳ್ತಂಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಪ್ರಗತಿಯಲ್ಲಿದ್ದು , ಮಳೆಗಾಲದಲ್ಲಿ ಕಾಮಗಾರಿ ಆರಂಭಿಸಿದ ಕಾರಣದಿಂದ ಧರೆಯ ಮಣ್ಣು ಕುಸಿದು ಪಕ್ಕದ ಪೊಲೀಸ್ ಠಾಣೆಯ ಆವರಣ ಗೋಡೆ ಕುಸಿಯುವ ಭೀತಿ ಎದುರಾಗಿದೆ.</p>.<p>ಬೆಳ್ತಂಗಡಿ ತಾಲ್ಲೂಕು ಕಚೇರಿಯ ಶತಮಾನದಷ್ಟು ಹಳೆಯದಾದ ಕಟ್ಟಡವನ್ನು ಕೆಡವಿ ಅದೇ ಜಾಗದಲ್ಲಿ ಹೊಸ ಬಸ್ ನಿಲ್ದಾಣದ ಕಾಮಗಾರಿ ನಡೆಯುತ್ತಿದೆ. ಬಸ್ ನಿಲ್ದಾಣದ ನಿಲುಗಡೆ ಪ್ರದೇಶಕ್ಕಾಗಿ 10 ರಿಂದ 15 ಅಡಿ ಆಳದಲ್ಲಿ ಮಣ್ಣು ತೆಗೆಯಲಾಗಿದೆ. ಇದರ ಸುತ್ತಲೂ ತಾಲ್ಲೂಕು ಕಛೇರಿ , ಪೋಲಿಸ್ ಠಾಣೆ , ನಾರಾಯಣ ಗುರು ವಾಣಿಜ್ಯ ಸಂಕೀರ್ಣ , ಗಿರಣಿ ಅಂಗಡಿ ಇದ್ದು, ಈಗ ಈ ಗುಂಡಿಯಲ್ಲಿ ಮಳೆ ನೀರು ನಿಂತು ಈಜುಕೊಳದಂತೆ ಬಾಸವಾಗುತ್ತಿದೆ.</p>.<p>ಮತ್ತೊಂದೆಡೆ ತಡೆಗೋಡೆ ನಿರ್ಮಾಣ ಕಾರ್ಯ ನಡೆದು ಮಣ್ಣು ತುಂಬಿಸಲಾಗಿದ್ದರೂ, ವಿಪರೀತ ಮಳೆಯಿಂದಾಗಿ ಪೊಲೀಸ್ ಠಾಣೆಯ ಭಾಗದಲ್ಲಿ ಮಣ್ಣು ಕುಸಿದಿದೆ. ಮಳೆ ಮುಂದುವರಿದರೆ ಇನ್ನಷ್ಟು ಮಣ್ಣು ಕುಸಿದು ಠಾಣೆಯ ಆವರಣ ಗೋಡೆ ಕುಸಿಯುವ ಸಾಧ್ಯತೆಯಿದೆ.</p>.<p>ಅವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸಿರುವುದರಿಂದ ಭೂಕುಸಿತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>