ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು: ಮಾಜಿ ಶಾಸಕನ‌ ಸಹೋದರ ಮಮ್ತಾಜ್ ಅಲಿ ನಾಪತ್ತೆ

ಕೂಳೂರು ಸೇತುವೆ ಬಳಿ ಕಾರು ಪತ್ತೆ
Published : 6 ಅಕ್ಟೋಬರ್ 2024, 2:53 IST
Last Updated : 6 ಅಕ್ಟೋಬರ್ 2024, 2:53 IST
ಫಾಲೋ ಮಾಡಿ
Comments

ಮಂಗಳೂರು: ಮಾಜಿ ಶಾಸಕ ಮೊಹಿಯುದ್ದೀನ್‌ ಬಾವ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ನಗರದ ಕೂಳೂರು ಸೇತುವೆ ಬಳಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.

ಮಮ್ತಾಜ್ ಅಲಿ ಅವರು ಕಾಣೆಯಾಗಿದ್ದು, ಅವರು ನದಿಗೆ ಬಿದ್ದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಅವರಿಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

'ಕೂಳೂರು ನದಿಯ ಬಳಿ ಕಪ್ಪು ಬಣ್ಣದ ಬಿಎಂಡಬ್ಲು ಕಾರು ಪತ್ತೆಯಾದ ಬಗ್ಗೆ ಭಾನುವಾರ ಮುಂಜಾನೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಅದು ಮಮ್ತಾಜ್ ಅಲಿ ಅವರದು ಎಂದು ಗೊತ್ತಾಗಿದೆ. ಅವರಿಗಾಗಿ ಅಗ್ನಿಶಾಮಕ ನತ್ತು ತುರ್ತು ಸೇವಾ ತಂಡದವರು ಹಾಗೂ ನಮ್ಮ ಸಿಬ್ಬಂದಿ ಹುಡುಕಾಡುತ್ತಿದ್ದಾರೆ' ಎಂದು ಪಣಂಬೂರು ಠಾಣೆಯ ಪೊಲೀಸರು ಮಾಹಿತಿ ನೀಡಿದರು.

ಕಾರು ಸೇತುವೆಯ ಮಧ್ಯದಲ್ಲೇ ಇತ್ತು. ವಾಹನ ಸಂಚಾರಕ್ಕೆ ಅಡ್ಡಿ ಆಗಬಾರದೆಂಬ ಕಾರಣಕ್ಕೆ ಅದನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಕಾರು ಅಲ್ಲಿಗೆ ಬರುವ ಮೊದಲೇ ಅಪಘಾತಕ್ಕೆ ಈಡಾದಂತಿದ್ದು ಅದರ ಮುಂಭಾಗ ನಜ್ಜುಗುಜ್ಜಾಗಿದೆ.

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ, ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಮ್ತಾಜ್ ಅಲಿ ಅವರು ಮುಂಜಾನೆ‌ 3 ಗಂಟೆಯ ವೇಳೆಗೆ ಮನೆಯಿಂದ ಹೊರಟಿದ್ದರು. ಮುಂಜಾನೆ 5 ಗಂಟೆ ವೇಳೆಗೆ ಕಾರು ಕೂಳೂರು ಸೇತುವೆ ಬಳಿ ಪತ್ತೆಯಾಗಿದೆ ಎಂದು ಗೊತ್ತಾಗಿದೆ.

ನಗರದ ಕೂಳೂರು ಸೇತುವೆ ಬಳಿ ಕಾರು ಪತ್ತೆಯಾಗಿದೆ

ನಗರದ ಕೂಳೂರು ಸೇತುವೆ ಬಳಿ ಕಾರು ಪತ್ತೆಯಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT