<p><strong>ಹುಬ್ಬಳ್ಳಿ:</strong> ಇಡೀ ದೇಶ ರಾಮಮಯವಾಗಿದೆ. ಅದಕ್ಕೆ ಕಾಂಗ್ರೆಸ್ಗೆ ಹೊಟ್ಟೆಕಿಚ್ಚಾಗಿದೆ. ಬೆಂಕಿ ಹೊತ್ತಿಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ ಎಂದು ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಟೀಕಿಸಿದರು.</p>.<p>1992ರ ಗಲಭೆ ಪ್ರಕರಣದಲ್ಲಿ ಬಂಧಿತನಾಗಿರುವ ಇಲ್ಲಿನ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರ ಮನೆಗೆ ಗುರುವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ಶ್ರೀಕಾಂತ ಅವರನ್ನು ಬಂಧಿಸಿರುವುದು ಸರ್ಕಾರದ ಅಮಾನವೀಯ, ಅಮಾನುಷ ಕ್ರಮವಾಗಿದೆ. ಹಿಂದೂ ಕಾರ್ಯಕರ್ತರಲ್ಲಿ ಭಯ ಹುಟ್ಟಿಸಲೆಂದೇ ಈ ರೀತಿ ಬಂಧನ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>ಯತೀಂದ್ರ ಅವರು ತಮ್ಮ ತಂದೆ ಸಿದ್ದರಾಮಯ್ಯ ಅವರ ಧೋತಿ ಹಿಡಿದು ಬೆಳೆದಿದ್ದಾರೆ. ಇವರಿಗೆ ಹಿಂದೂ, ಹಿಂದುತ್ವ, ದೇಶ, ಧರ್ಮ ಬಗ್ಗೆ ಏನೂ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.</p>.<p>ಇನ್ನೊಂದು ಗೋಧ್ರಾ ಘಟನೆ ಸಂಭವಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳುವ ಮೂಲಕ ಮುಸ್ಲಿಮರಿಗೆ ಗಲಭೆ, ದೊಂಬೆ ಎಬ್ಬಿಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p><strong>‘ಹಿಂದೂರಾಷ್ಟ್ರ ಆಗುವುದು ತಡೆಯಲಾಗದು’</strong></p><p><strong>ಹುಬ್ಬಳ್ಳಿ:</strong> ‘2024ರಲ್ಲಿ ನರೇಂದ್ರ ಮೋದಿ ಅವರು ಪುನಃ ಪ್ರಧಾನಿಯಾದ ಬಳಿಕ ಭಾರತವು ಹಿಂದೂ ರಾಷ್ಟ್ರ ಆಗಲಿದೆ. ತಾಕತ್ತಿದ್ದರೆ ಕಾಂಗ್ರೆಸ್ ತಡೆಯಲಿ’ ಎಂದು ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸವಾಲು ಹಾಕಿದರು.</p><p>‘ಪಾಕಿಸ್ತಾನ ಮುಸ್ಲಿಮರ ದೇಶ ಆಗುವುದಾದರೆ ಭಾರತ ಹಿಂದೂ ರಾಷ್ಟ್ರ ಏಕೆ ಆಗಬಾರದು. ಇಲ್ಲಿ ಮುಸ್ಲಿಮರು, ಕ್ರೈಸ್ತರು ಸೇರಿ ಎಲ್ಲರೂ ವಾಸಿಸಬಹುದು. ನಾವು ಯಾರನ್ನೂ ಹೊರಹಾಕಲ್ಲ’ ಎಂದು ಹೇಳಿದರು.</p><p>‘ಶ್ರೀಕಾಂತ ಪೂಜಾರಿ ರೌಡಿಶೀಟರ್, ಅಪರಾಧಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಸ್ಥಳೀಯ ಶಾಸಕ (ಪ್ರಸಾದ್ ಅಬ್ಬಯ್ಯ) ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರು, ರಾಮನ ಭಕ್ತರೇ ಮುಖ್ಯಮಂತ್ರಿ ಅವರ ಟಾರ್ಗೆಟ್’ ಎಂದು ಮುತಾಲಿಕ್ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಇಡೀ ದೇಶ ರಾಮಮಯವಾಗಿದೆ. ಅದಕ್ಕೆ ಕಾಂಗ್ರೆಸ್ಗೆ ಹೊಟ್ಟೆಕಿಚ್ಚಾಗಿದೆ. ಬೆಂಕಿ ಹೊತ್ತಿಕೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ ಎಂದು ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಟೀಕಿಸಿದರು.</p>.<p>1992ರ ಗಲಭೆ ಪ್ರಕರಣದಲ್ಲಿ ಬಂಧಿತನಾಗಿರುವ ಇಲ್ಲಿನ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರ ಮನೆಗೆ ಗುರುವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ಶ್ರೀಕಾಂತ ಅವರನ್ನು ಬಂಧಿಸಿರುವುದು ಸರ್ಕಾರದ ಅಮಾನವೀಯ, ಅಮಾನುಷ ಕ್ರಮವಾಗಿದೆ. ಹಿಂದೂ ಕಾರ್ಯಕರ್ತರಲ್ಲಿ ಭಯ ಹುಟ್ಟಿಸಲೆಂದೇ ಈ ರೀತಿ ಬಂಧನ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>ಯತೀಂದ್ರ ಅವರು ತಮ್ಮ ತಂದೆ ಸಿದ್ದರಾಮಯ್ಯ ಅವರ ಧೋತಿ ಹಿಡಿದು ಬೆಳೆದಿದ್ದಾರೆ. ಇವರಿಗೆ ಹಿಂದೂ, ಹಿಂದುತ್ವ, ದೇಶ, ಧರ್ಮ ಬಗ್ಗೆ ಏನೂ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.</p>.<p>ಇನ್ನೊಂದು ಗೋಧ್ರಾ ಘಟನೆ ಸಂಭವಿಸಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳುವ ಮೂಲಕ ಮುಸ್ಲಿಮರಿಗೆ ಗಲಭೆ, ದೊಂಬೆ ಎಬ್ಬಿಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p><strong>‘ಹಿಂದೂರಾಷ್ಟ್ರ ಆಗುವುದು ತಡೆಯಲಾಗದು’</strong></p><p><strong>ಹುಬ್ಬಳ್ಳಿ:</strong> ‘2024ರಲ್ಲಿ ನರೇಂದ್ರ ಮೋದಿ ಅವರು ಪುನಃ ಪ್ರಧಾನಿಯಾದ ಬಳಿಕ ಭಾರತವು ಹಿಂದೂ ರಾಷ್ಟ್ರ ಆಗಲಿದೆ. ತಾಕತ್ತಿದ್ದರೆ ಕಾಂಗ್ರೆಸ್ ತಡೆಯಲಿ’ ಎಂದು ಶ್ರೀರಾಮ ಸೇನೆ ಸಂಘಟನೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸವಾಲು ಹಾಕಿದರು.</p><p>‘ಪಾಕಿಸ್ತಾನ ಮುಸ್ಲಿಮರ ದೇಶ ಆಗುವುದಾದರೆ ಭಾರತ ಹಿಂದೂ ರಾಷ್ಟ್ರ ಏಕೆ ಆಗಬಾರದು. ಇಲ್ಲಿ ಮುಸ್ಲಿಮರು, ಕ್ರೈಸ್ತರು ಸೇರಿ ಎಲ್ಲರೂ ವಾಸಿಸಬಹುದು. ನಾವು ಯಾರನ್ನೂ ಹೊರಹಾಕಲ್ಲ’ ಎಂದು ಹೇಳಿದರು.</p><p>‘ಶ್ರೀಕಾಂತ ಪೂಜಾರಿ ರೌಡಿಶೀಟರ್, ಅಪರಾಧಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಸ್ಥಳೀಯ ಶಾಸಕ (ಪ್ರಸಾದ್ ಅಬ್ಬಯ್ಯ) ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹಿಂದೂ ಕಾರ್ಯಕರ್ತರು, ರಾಮನ ಭಕ್ತರೇ ಮುಖ್ಯಮಂತ್ರಿ ಅವರ ಟಾರ್ಗೆಟ್’ ಎಂದು ಮುತಾಲಿಕ್ ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>