ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎನ್ನುವ ಕೂಗಿನ ಜೊತೆಗೆ ಈಗ ಮುಖ್ಯಮಂತ್ರಿ ಬದಲಾವಣೆ ಆಗಬೇಕೆಂದು ಎಂಬ ಗೊಂದಲ ನಿರ್ಮಿಸಲಾಗುತ್ತಿದೆ. ಯಾರ ಮನದಲ್ಲಿ ಏನಿದೆ ಎಂಬುದನ್ನು ಬೇರೆಯವರಿಂದ ಹೇಳಿಸುವ ಪ್ರಯತ್ನ ನಡೆದಿದೆ. ಏನಿದ್ದರೂ ನೇರವಾಗಿ ಹೈಕಮಾಂಡ್ ಮುಂದೆ ಹೇಳಬೇಕು’ ಎಂದರು.