ದಾಸ್ತಾನು ಇಟ್ಟರೆ ಹಾಳಾಗುತ್ತದೆ ಎಂದು ಆಗಾಗ ತಂದು ಆಹಾರ ತಯಾರಿಸುತ್ತೇವೆ. ಪುರಸಭೆಯಿಂದ ನೀರಿನ ಸಂಪರ್ಕ ಕಲ್ಪಿಸಿಲ್ಲ. ವಿದ್ಯುತ್ ಬಿಲ್ ಕಟ್ಟಿರಲಿಲ್ಲ. ಈ ದಿನವೇ ಬಾಕಿ ಕಟ್ಟುತ್ತೇವೆ.
ರಮೇಶ್, ಇಂದಿರಾ ಕ್ಯಾಂಟೀನ್ ಗುತ್ತಿಗೆದಾರ ಕಂಪನಿಯ ಜಿಲ್ಲಾ ವ್ಯವಸ್ಥಾಪಕ
ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಈಗಾಗಲೇ ಅವರಿಗೆ ನಾಲ್ಕು ನೋಟಿಸ್ ನೀಡಲಾಗಿದೆ. ಸರಿಯಾಗಿ ಸ್ಪಂದಿಸುತ್ತಿಲ್ಲ. ಅಕ್ಟೋಬರ್ ಲೆಕ್ಕವನ್ನು ಇನ್ನೂ ನೀಡಿಲ್ಲ.
ರಮೇಶ್, ಪುರಸಭಾ ಮುಖ್ಯಾಧಿಕಾರಿ
ರಾತ್ರಿ ಬಂದು ಊಟ ಮಾಡಿದವರನ್ನು ನಾನು ನೋಡಿಯೇ ಇಲ್ಲ. ಒಳ್ಳೆಯ ಯೋಜನೆಯ ಹೆಸರಿನಲ್ಲಿ ಸುಳ್ಳು ಲೆಕ್ಕ ನೀಡಿ ಸರ್ಕಾರದ ಹಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.
ಅಣ್ಣಪ್ಪ, ಪುರಸಭಾ ಸದಸ್ಯ
ರಾತ್ರಿ ವೇಳೆ ಇಂದಿರಾ ಕ್ಯಾಂಟೀನ್ನಲ್ಲಿ ಯಾವುದೇ ದಾಸ್ತಾನು ಇರಲಿಲ್ಲ.