ತನಿಖಾಧಿಕಾರಿಯಾಗಿರುವ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್, ಸೂರಜ್ ಅವರನ್ನು ಬಂಧಿಸಿದ್ದು, ಮಧ್ಯಾಹ್ನ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.
ಶನಿವಾರ ರಾತ್ರಿ 7.30 ರ ಸಮಯದಲ್ಲಿ ಸಿಇಎನ್ ಪೊಲೀಸ್ ಠಾಣೆಗೆ ಡಾ.ಸೂರಜ್ರೇವಣ್ಣ ಅವರನ್ನು ಕರೆ ತಂದಿದ್ದ ಪೊಲೀಸರು ಸಂತ್ರಸ್ತ ನೀಡಿರುವ ದೂರು ಹಾಗೂ ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.
ರಾತ್ರಿ ಪೊಲೀಸ್ ಠಾಣೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿ ತೆರಳಿದ್ದರು. ಮತ್ತೊಂದೆಡೆ ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದ ಪೊಲೀಸರು ವೈದ್ಯಕೀಯ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.