<p><strong>ಕೋಲಾರ:</strong> ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಮ್ಮ 28 ಅಭ್ಯರ್ಥಿಗಳನ್ನೂ ಗೆಲ್ಲಿಸಿದರೆ ಒಂದು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸುತ್ತೇವೆ. ಇದು ನಾವು ರಾಜ್ಯದ ಜನರಿಗೆ ನೀಡುವ ಗ್ಯಾರಂಟಿ’ ಎಂದು ಶಾಸಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಬಿಜೆಪಿ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ, ವರ್ಗಗಳಿಗೆ ನೀಡಬೇಕಾಗಿದ್ದ ಮೀಸಲಾತಿ ಹಂಚಿದ್ದು ನಾವು. ಕಾಂಗ್ರೆಸ್ಸಿನವರು ದಲಿತರನ್ನು ವಂಚಿಸಿ ಅವರ ಹಣದಲ್ಲಿ ಗ್ಯಾರಂಟಿ ನೀಡುತ್ತಿದ್ದಾರೆ’ ಎಂದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಕಾಂತರಾಜ ವರದಿ ಸ್ವೀಕರಿಸುವುದಾಗಿ ಹೇಳಿರುವುದು ಚುನಾವಣಾ ಗಿಮಿಕ್ ಆಗಿದೆ. ವರದಿ ಸ್ವೀಕರಿಸಿದ ಕೂಡಲೇ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಲಿದೆ. ಆಮೇಲೆ ಚುನಾವಣೆ ಮುಗಿದ ಬಳಿಕ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಹೇಳುತ್ತಾರೆ’ ಎಂದು ಟೀಕಿಸಿದರು.</p>.<p>‘ಶೋಷಿತರ ಸಮಾವೇಶದಲ್ಲೇ ಶೋಷಿತ ಸಮುದಾಯದ ಹಾಗೂ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತಂತೆ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸಂಸ್ಕೃತಿ ಪ್ರದರ್ಶಿಸಿದ್ದಾರೆ’ ಎಂದು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಮ್ಮ 28 ಅಭ್ಯರ್ಥಿಗಳನ್ನೂ ಗೆಲ್ಲಿಸಿದರೆ ಒಂದು ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸುತ್ತೇವೆ. ಇದು ನಾವು ರಾಜ್ಯದ ಜನರಿಗೆ ನೀಡುವ ಗ್ಯಾರಂಟಿ’ ಎಂದು ಶಾಸಕ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಬಿಜೆಪಿ ಪ್ರತಿಭಟನೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ, ವರ್ಗಗಳಿಗೆ ನೀಡಬೇಕಾಗಿದ್ದ ಮೀಸಲಾತಿ ಹಂಚಿದ್ದು ನಾವು. ಕಾಂಗ್ರೆಸ್ಸಿನವರು ದಲಿತರನ್ನು ವಂಚಿಸಿ ಅವರ ಹಣದಲ್ಲಿ ಗ್ಯಾರಂಟಿ ನೀಡುತ್ತಿದ್ದಾರೆ’ ಎಂದರು.</p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಕಾಂತರಾಜ ವರದಿ ಸ್ವೀಕರಿಸುವುದಾಗಿ ಹೇಳಿರುವುದು ಚುನಾವಣಾ ಗಿಮಿಕ್ ಆಗಿದೆ. ವರದಿ ಸ್ವೀಕರಿಸಿದ ಕೂಡಲೇ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಲಿದೆ. ಆಮೇಲೆ ಚುನಾವಣೆ ಮುಗಿದ ಬಳಿಕ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ಹೇಳುತ್ತಾರೆ’ ಎಂದು ಟೀಕಿಸಿದರು.</p>.<p>‘ಶೋಷಿತರ ಸಮಾವೇಶದಲ್ಲೇ ಶೋಷಿತ ಸಮುದಾಯದ ಹಾಗೂ ದೇಶದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತಂತೆ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಸಂಸ್ಕೃತಿ ಪ್ರದರ್ಶಿಸಿದ್ದಾರೆ’ ಎಂದು ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>