<p><strong>ಪಾಂಡವಪುರ(ಮಂಡ್ಯ</strong>)<strong>:</strong> ಕುಡಿದ ನಶೆಯಲ್ಲಿ ಸ್ನೇಹಿತರ ನಡುವೆ ಮಾತಿನ ಚಕಮಕಿ ನಡೆದು, ಕೋಪದಲ್ಲಿ ಸ್ನೇಹಿತನಿಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಚಿನಕುರುಳಿ ಗ್ರಾಮದಲ್ಲಿ ನಡೆದಿದೆ. </p> <p>ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಅರವಿಂದ್(27) ಕೊಲೆಯಾದ ಯುವಕ. ವಿಜಯ್ ಹತ್ಯೆ ಮಾಡಿದ ಆರೋಪಿ.</p> <p>ಇಬ್ಬರು ನಾಗಮಂಗಲ ತಾಲ್ಲೂಕಿನ ತಿರುಮಲಾಪುರ ಗ್ರಾಮದವರು. ಕಲ್ಲು ಕೆಲಸ ಮಾಡಲೆಂದು ಜೊತೆಗೆ ಬಂದಿದ್ದರು. ಕುಮಾರ್ ಎಂಬುವವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.</p> <p>'ಕುಡಿದ ಮತ್ತಿನಲ್ಲಿ ನಿನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿರುವುದಾಗಿ ಅರವಿಂದ್ ಹೇಳಿದ್ದಾನೆ. ಇದರಿಂದ ಕುಪಿತಗೊಂಡ ವಿಜಯ್ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ' ಎಂದು ಪೊಲೀಸರು ತಿಳಿಸಿದ್ದಾರೆ.</p> <p>ಈ ವೇಳೆ ಮತ್ತೊಬ್ಬ ಸ್ನೇಹಿತ ಏಳುಮಲೈ ಜತೆಗಿದ್ದ. ಘಟನೆ ಸಂಬಂಧ ಆರೋಪಿ ವಿಜಯ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.ಆಳಂದ: ಸ್ನೇಹಿತನ ಕೊಲೆ- ಆರೋಪಿ ವಶಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ(ಮಂಡ್ಯ</strong>)<strong>:</strong> ಕುಡಿದ ನಶೆಯಲ್ಲಿ ಸ್ನೇಹಿತರ ನಡುವೆ ಮಾತಿನ ಚಕಮಕಿ ನಡೆದು, ಕೋಪದಲ್ಲಿ ಸ್ನೇಹಿತನಿಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಚಿನಕುರುಳಿ ಗ್ರಾಮದಲ್ಲಿ ನಡೆದಿದೆ. </p> <p>ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಅರವಿಂದ್(27) ಕೊಲೆಯಾದ ಯುವಕ. ವಿಜಯ್ ಹತ್ಯೆ ಮಾಡಿದ ಆರೋಪಿ.</p> <p>ಇಬ್ಬರು ನಾಗಮಂಗಲ ತಾಲ್ಲೂಕಿನ ತಿರುಮಲಾಪುರ ಗ್ರಾಮದವರು. ಕಲ್ಲು ಕೆಲಸ ಮಾಡಲೆಂದು ಜೊತೆಗೆ ಬಂದಿದ್ದರು. ಕುಮಾರ್ ಎಂಬುವವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.</p> <p>'ಕುಡಿದ ಮತ್ತಿನಲ್ಲಿ ನಿನ್ನ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿರುವುದಾಗಿ ಅರವಿಂದ್ ಹೇಳಿದ್ದಾನೆ. ಇದರಿಂದ ಕುಪಿತಗೊಂಡ ವಿಜಯ್ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆ' ಎಂದು ಪೊಲೀಸರು ತಿಳಿಸಿದ್ದಾರೆ.</p> <p>ಈ ವೇಳೆ ಮತ್ತೊಬ್ಬ ಸ್ನೇಹಿತ ಏಳುಮಲೈ ಜತೆಗಿದ್ದ. ಘಟನೆ ಸಂಬಂಧ ಆರೋಪಿ ವಿಜಯ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.ಆಳಂದ: ಸ್ನೇಹಿತನ ಕೊಲೆ- ಆರೋಪಿ ವಶಕ್ಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>