ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಅಸಮಾಧಾನ ಹೊಂದಿದ್ದು, ಸಿದ್ದರಾಮಯ್ಯ ವಿರುದ್ಧ ದ್ವೇಷ ಕಾರುತ್ತಿವೆ. ಮುಡಾ ಹಗರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಪಾಲು ದೊಡ್ಡದಿದ್ದು, ಮುಖ್ಯಮಂತ್ರಿ ವಿರುದ್ಧ ಮಾತನಾಡುವ ನೈತಿಕತೆ ಅವರಿಗಿಲ್ಲ. ಇದೇ ರೀತಿ ಆರೋಪಿಸುವುದನ್ನು ಮುಂದುವರಿಸಿದರೆ ಮುಂದಿನ ವಾರ ಬೆಂಗಳೂರಿನ ಅವರ ನಿವಾಸಕ್ಕೆ ವೇದಿಕೆ ಸದಸ್ಯರು ಮುತ್ತಿಗೆ ಹಾಕಲಿದ್ದಾರೆ’ ಎಂದು ಎಚ್ಚರಿಸಿದರು.