<p><strong>ವಿಜಯಪುರ</strong>: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೊಟದ ವಸ್ತಿಯಲ್ಲಿ ಪಾಳುಬಿದ್ದ ಕೊಳವೆಬಾವಿಗೆ ಬಿದ್ದಿ ಜೀವನ್ಮರಣದ ನಡುವೆ ಹೋರಾಡುತ್ತಿರುವ ಬಾಲಕನ ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆದಿದೆ.</p><p>ಲಚ್ಯಾಣ ಗ್ರಾಮದ ಸತೀಶ ಮುಜಗೊಂಡ ಅವರ ಪುತ್ರ ಸಾತ್ವಿಕ್ (14 ತಿಂಗಳು) ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದಾನೆ. ಅಂದಾಜು 16 ಅಡಿ ಆಳದಲ್ಲಿ ಬಾಲಕ ಸಿಲುಕಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.</p><p>ಕ್ಯಾಮೆರಾವನ್ನು ಕೊಳವೆಬಾವಿಯೊಳಗೆ ಇಳಿ ಬಿಟ್ಟು ಬಾಲಕನ ಸ್ಥಿತಿಗತಿ ಮೇಲೆ ನಿಗಾ ವಹಿಸಲಾಗಿದೆ. ಬಾಲಕ ಕೈ, ಕಾಲು ಅಲುಗಾಡಿಸುತ್ತಿರುವುದು ಕ್ಯಾಮೆರಾದಲ್ಲಿ ಗೋಚರಿಸುತ್ತಿದ್ದು, ಬಾಲಕನ ಉಸಿರಾಟಕ್ಕೆ ಆಮ್ಲಜನಕ(ಆಕ್ಸಿಜನ್)ವನ್ನು ಪೈಪ್ ಮೂಲಕ ವೈದ್ಯರು ಪೂರೈಸುತ್ತಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.</p><p>ರಾತ್ರಿಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ನಿಧಾನವಾಗಿದೆ. ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಬಾಲಕನ ರಕ್ಷಣೆಗಾಗಿ ಕೊಳವೆಬಾವಿಗೆ ಸಮಾನಾಂತರವಾಗಿ ಪಕ್ಕದಲ್ಲೇ ಜೆಸಿಬಿ ಯಂತ್ರದ ಮೂಲಕ ಗುಂಡಿ ತೋಡಿ, ಮಣ್ಣನ್ನು ಹೊರ ತೆಗೆಯಲಾಗುತ್ತಿದೆ.</p>.ವಿಜಯಪುರ: ಕೊಳವೆ ಬಾವಿಗೆ ಬಿದ್ದ ಬಾಲಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೊಟದ ವಸ್ತಿಯಲ್ಲಿ ಪಾಳುಬಿದ್ದ ಕೊಳವೆಬಾವಿಗೆ ಬಿದ್ದಿ ಜೀವನ್ಮರಣದ ನಡುವೆ ಹೋರಾಡುತ್ತಿರುವ ಬಾಲಕನ ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆದಿದೆ.</p><p>ಲಚ್ಯಾಣ ಗ್ರಾಮದ ಸತೀಶ ಮುಜಗೊಂಡ ಅವರ ಪುತ್ರ ಸಾತ್ವಿಕ್ (14 ತಿಂಗಳು) ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದಾನೆ. ಅಂದಾಜು 16 ಅಡಿ ಆಳದಲ್ಲಿ ಬಾಲಕ ಸಿಲುಕಿಕೊಂಡಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.</p><p>ಕ್ಯಾಮೆರಾವನ್ನು ಕೊಳವೆಬಾವಿಯೊಳಗೆ ಇಳಿ ಬಿಟ್ಟು ಬಾಲಕನ ಸ್ಥಿತಿಗತಿ ಮೇಲೆ ನಿಗಾ ವಹಿಸಲಾಗಿದೆ. ಬಾಲಕ ಕೈ, ಕಾಲು ಅಲುಗಾಡಿಸುತ್ತಿರುವುದು ಕ್ಯಾಮೆರಾದಲ್ಲಿ ಗೋಚರಿಸುತ್ತಿದ್ದು, ಬಾಲಕನ ಉಸಿರಾಟಕ್ಕೆ ಆಮ್ಲಜನಕ(ಆಕ್ಸಿಜನ್)ವನ್ನು ಪೈಪ್ ಮೂಲಕ ವೈದ್ಯರು ಪೂರೈಸುತ್ತಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.</p><p>ರಾತ್ರಿಯಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ನಿಧಾನವಾಗಿದೆ. ಬೆಳಕಿನ ವ್ಯವಸ್ಥೆ ಮಾಡಲಾಗಿದೆ. ಬಾಲಕನ ರಕ್ಷಣೆಗಾಗಿ ಕೊಳವೆಬಾವಿಗೆ ಸಮಾನಾಂತರವಾಗಿ ಪಕ್ಕದಲ್ಲೇ ಜೆಸಿಬಿ ಯಂತ್ರದ ಮೂಲಕ ಗುಂಡಿ ತೋಡಿ, ಮಣ್ಣನ್ನು ಹೊರ ತೆಗೆಯಲಾಗುತ್ತಿದೆ.</p>.ವಿಜಯಪುರ: ಕೊಳವೆ ಬಾವಿಗೆ ಬಿದ್ದ ಬಾಲಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>