<p>ಬೆಂಗಳೂರು: ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತದಾನ ಜರುಗಲಿದ್ದು, ಬೆಂಗಳೂರಿನಲ್ಲಿರುವ ಹಲವರು ಹೆಚ್ಚಿನ ಸಂಖ್ಯೆಯಲ್ಲಿ ಸೋಮವಾರ ರಾತ್ರಿ ತಮ್ಮೂರಿನತ್ತ ಪ್ರಯಾಣ ಬೆಳೆಸಿದರು.</p>.<p>ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಉತ್ತರ ಕನ್ನಡ, ಹಾವೇರಿ ಹಾಗೂ ಇತರೆ ಜಿಲ್ಲೆಗಳ ವಲಸೆ ಕಾರ್ಮಿಕರು ಹಾಗೂ ಹಲವು ಕಂಪನಿಗಳ ಉದ್ಯೋಗಿಗಳು ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಈ ಪೈಕಿ ಬಹುತೇಕರ ಹೆಸರುಗಳು, ಅವರ ಸ್ವಂತ ಊರಿನ ಮತದಾರರ ಪಟ್ಟಿಯಲ್ಲಿವೆ.</p>.<p>ಮತದಾನ ಮಾಡುವ ಉದ್ದೇಶದಿಂದ ಹಲವರು, ಕುಟುಂಬ ಸಮೇತರಾಗಿ ಮೆಜೆಸ್ಟಿಕ್ ಕೇಂದ್ರ ನಿಲ್ದಾಣ ಹಾಗೂ ಇತರೆ ನಿಲ್ದಾಣಗಳಿಂದ ಬಸ್ಗಳಲ್ಲಿ ತಮ್ಮೂರಿನತ್ತ ಪ್ರಯಾಣ ಬೆಳೆಸಿದರು. ಇದರಿಂದಾಗಿ, ನಿಲ್ದಾಣಗಳಲ್ಲಿ ಸೋಮವಾರ ರಾತ್ರಿ ಜನದಟ್ಟಣೆ ಹೆಚ್ಚಿತ್ತು.</p>.<p>ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಹೆಚ್ಚಿನ ಬಸ್ಗಳ ವ್ಯವಸ್ಥೆ ಮಾಡಿತ್ತು. ಬಿಎಂಟಿಸಿ ಬಸ್ಗಳನ್ನು ಸಹ ಹೊರ ಜಿಲ್ಲೆಗಳಿಗೆ ಕಳುಹಿಸಲಾಯಿತು. ಎಲ್ಲ ಬಸ್ಗಳು ಪ್ರಯಾಣಿಕರಿಂದ ಭರ್ತಿಯಾಗಿ ಸಂಚರಿಸಿದವು.</p>.<p>ಖಾಸಗಿ ಬಸ್ಗಳು ಹಾಗೂ ಸ್ವಂತ ವಾಹನಗಳಲ್ಲಿಯೂ ಜನರು ಪ್ರಯಾಣಿಸಿದರು. ಇದರಿಂದಾಗಿ ಮೆಜೆಸ್ಟಿಕ್ ಸುತ್ತಮುತ್ತ ವಿಪರೀತ ದಟ್ಟಣೆ ಉಂಟಾಯಿತು. ತುಮಕೂರು ರಸ್ತೆಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಕಂಡುಬಂದವು. ಟೋಲ್ಗೇಟ್ಗಳಲ್ಲಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದು ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತದಾನ ಜರುಗಲಿದ್ದು, ಬೆಂಗಳೂರಿನಲ್ಲಿರುವ ಹಲವರು ಹೆಚ್ಚಿನ ಸಂಖ್ಯೆಯಲ್ಲಿ ಸೋಮವಾರ ರಾತ್ರಿ ತಮ್ಮೂರಿನತ್ತ ಪ್ರಯಾಣ ಬೆಳೆಸಿದರು.</p>.<p>ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಉತ್ತರ ಕನ್ನಡ, ಹಾವೇರಿ ಹಾಗೂ ಇತರೆ ಜಿಲ್ಲೆಗಳ ವಲಸೆ ಕಾರ್ಮಿಕರು ಹಾಗೂ ಹಲವು ಕಂಪನಿಗಳ ಉದ್ಯೋಗಿಗಳು ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಈ ಪೈಕಿ ಬಹುತೇಕರ ಹೆಸರುಗಳು, ಅವರ ಸ್ವಂತ ಊರಿನ ಮತದಾರರ ಪಟ್ಟಿಯಲ್ಲಿವೆ.</p>.<p>ಮತದಾನ ಮಾಡುವ ಉದ್ದೇಶದಿಂದ ಹಲವರು, ಕುಟುಂಬ ಸಮೇತರಾಗಿ ಮೆಜೆಸ್ಟಿಕ್ ಕೇಂದ್ರ ನಿಲ್ದಾಣ ಹಾಗೂ ಇತರೆ ನಿಲ್ದಾಣಗಳಿಂದ ಬಸ್ಗಳಲ್ಲಿ ತಮ್ಮೂರಿನತ್ತ ಪ್ರಯಾಣ ಬೆಳೆಸಿದರು. ಇದರಿಂದಾಗಿ, ನಿಲ್ದಾಣಗಳಲ್ಲಿ ಸೋಮವಾರ ರಾತ್ರಿ ಜನದಟ್ಟಣೆ ಹೆಚ್ಚಿತ್ತು.</p>.<p>ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಹೆಚ್ಚಿನ ಬಸ್ಗಳ ವ್ಯವಸ್ಥೆ ಮಾಡಿತ್ತು. ಬಿಎಂಟಿಸಿ ಬಸ್ಗಳನ್ನು ಸಹ ಹೊರ ಜಿಲ್ಲೆಗಳಿಗೆ ಕಳುಹಿಸಲಾಯಿತು. ಎಲ್ಲ ಬಸ್ಗಳು ಪ್ರಯಾಣಿಕರಿಂದ ಭರ್ತಿಯಾಗಿ ಸಂಚರಿಸಿದವು.</p>.<p>ಖಾಸಗಿ ಬಸ್ಗಳು ಹಾಗೂ ಸ್ವಂತ ವಾಹನಗಳಲ್ಲಿಯೂ ಜನರು ಪ್ರಯಾಣಿಸಿದರು. ಇದರಿಂದಾಗಿ ಮೆಜೆಸ್ಟಿಕ್ ಸುತ್ತಮುತ್ತ ವಿಪರೀತ ದಟ್ಟಣೆ ಉಂಟಾಯಿತು. ತುಮಕೂರು ರಸ್ತೆಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಕಂಡುಬಂದವು. ಟೋಲ್ಗೇಟ್ಗಳಲ್ಲಿಯೂ ವಾಹನಗಳು ಸಾಲುಗಟ್ಟಿ ನಿಂತಿದ್ದು ಕಂಡುಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>