ಸಿಮಿಕೋಟ್ನಿಂದ ಯಾತ್ರಾರ್ಥಿಗಳೆಲ್ಲ ನೇಪಾಳ ಗಂಜ್ಗೆ ಬರಬೇಕಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಮಳೆಯಲ್ಲಿ ಸಿಲುಕಿಕೊಂಡವರನ್ನು ಕರೆತರುವ ಪ್ರಕ್ರಿಯೆ ಕೂಡ ವಿಳಂಬವಾಗಿದೆ. ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ. ಆದರೆ, ಆಹಾರದ ಕೊರತೆಯನ್ನು ಎದುರಿಸುತ್ತಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.