<p><strong>ಪಟ್ನಾ:</strong> ಬಿಹಾರದ ಸರಣ್ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿ 11 ಮಂದಿ ಮೃತಪಟ್ಟಿದ್ದಾರೆ. 12 ಜನ ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಈ ಪೈಕಿ ಹೆಚ್ಚಿನವರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಶ್ ಮೀನಾ ಹಾಗೂ ಎಸ್ಪಿ ಸಂತೋಷ್ ಕುಮಾರ್ ಛಪ್ರಾದಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ. ಕಳ್ಳಭಟ್ಟಿ ತಯಾರಿಕೆ ಆರೋಪದಲ್ಲಿ ಐವರನ್ನು ಬಂಧಿಸಲಾಗಿದೆ. ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿಯೊಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p><a href="https://www.prajavani.net/india-news/over-73000-arrested-for-liquor-related-crimes-in-dry-bihar-in-2022-960606.html" itemprop="url">ಬಿಹಾರ| ಮದ್ಯ ನಿಷೇಧ ಕಾಯ್ದೆ ಅಡಿ 1 ವರ್ಷದಲ್ಲಿ 73,000ಕ್ಕೂ ಹೆಚ್ಚು ಮಂದಿಯ ಬಂಧನ </a></p>.<p>ಮಾಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ವರಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಜನರು ಅಸ್ವಸ್ಥರಾಗುತ್ತಿರುವ ಬಗ್ಗೆ ಗುರುವಾರ ಮಾಹಿತಿ ತಿಳಿದುಬಂದಿತ್ತು. ಅಬಕಾರಿ ಅಧಿಕಾರಿಗಳನ್ನು ಮತ್ತು ವೈದ್ಯರನ್ನೊಳಗೊಂಡ ಪೊಲೀಸರ ತಂಡವನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿತ್ತು. ಅಸ್ವಸ್ಥಗೊಂಡವರನ್ನು ಸಮೀಪದ ಸಾದರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಅಸ್ವಸ್ಥಗೊಂಡವರನ್ನು ಬಳಿಕ ಪಟ್ನಾದ ಪಿಎಂಸಿಎಚ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮ್ಯಾಜಿಸ್ಟ್ರೇಟ್ ಹಾಗೂ ಎಸ್ಪಿ ತಿಳಿಸಿದ್ದಾರೆ.</p>.<p>‘ಶ್ರಾವಣ ಮಾಸದ ಹಬ್ಬವೊಂದರಲ್ಲಿ ಮದ್ಯಪಾನ ಮಾಡುವ ಸಂಪ್ರದಾಯ ಗ್ರಾಮಸ್ಥರಲ್ಲಿ ಇದೆ ಎಂಬ ಬಗ್ಗೆ ಮಾಹಿತಿ ದೊರೆತಿದೆ. ಆಗಸ್ಟ್ 3ರಂದು ಹಬ್ಬ ನಡೆದಿತ್ತು ಮತ್ತು ಸ್ಥಳೀಯರು ಮದ್ಯ ಸೇವಿಸಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರದ ಸರಣ್ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿ 11 ಮಂದಿ ಮೃತಪಟ್ಟಿದ್ದಾರೆ. 12 ಜನ ಗಂಭೀರವಾಗಿ ಅಸ್ವಸ್ಥಗೊಂಡಿದ್ದು, ಈ ಪೈಕಿ ಹೆಚ್ಚಿನವರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಶ್ ಮೀನಾ ಹಾಗೂ ಎಸ್ಪಿ ಸಂತೋಷ್ ಕುಮಾರ್ ಛಪ್ರಾದಲ್ಲಿ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದ್ದಾರೆ. ಕಳ್ಳಭಟ್ಟಿ ತಯಾರಿಕೆ ಆರೋಪದಲ್ಲಿ ಐವರನ್ನು ಬಂಧಿಸಲಾಗಿದೆ. ಪೊಲೀಸ್ ಠಾಣಾಧಿಕಾರಿ ಹಾಗೂ ಸಿಬ್ಬಂದಿಯೊಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.</p>.<p><a href="https://www.prajavani.net/india-news/over-73000-arrested-for-liquor-related-crimes-in-dry-bihar-in-2022-960606.html" itemprop="url">ಬಿಹಾರ| ಮದ್ಯ ನಿಷೇಧ ಕಾಯ್ದೆ ಅಡಿ 1 ವರ್ಷದಲ್ಲಿ 73,000ಕ್ಕೂ ಹೆಚ್ಚು ಮಂದಿಯ ಬಂಧನ </a></p>.<p>ಮಾಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಫುಲ್ವರಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಜನರು ಅಸ್ವಸ್ಥರಾಗುತ್ತಿರುವ ಬಗ್ಗೆ ಗುರುವಾರ ಮಾಹಿತಿ ತಿಳಿದುಬಂದಿತ್ತು. ಅಬಕಾರಿ ಅಧಿಕಾರಿಗಳನ್ನು ಮತ್ತು ವೈದ್ಯರನ್ನೊಳಗೊಂಡ ಪೊಲೀಸರ ತಂಡವನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿತ್ತು. ಅಸ್ವಸ್ಥಗೊಂಡವರನ್ನು ಸಮೀಪದ ಸಾದರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಅಸ್ವಸ್ಥಗೊಂಡವರನ್ನು ಬಳಿಕ ಪಟ್ನಾದ ಪಿಎಂಸಿಎಚ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮ್ಯಾಜಿಸ್ಟ್ರೇಟ್ ಹಾಗೂ ಎಸ್ಪಿ ತಿಳಿಸಿದ್ದಾರೆ.</p>.<p>‘ಶ್ರಾವಣ ಮಾಸದ ಹಬ್ಬವೊಂದರಲ್ಲಿ ಮದ್ಯಪಾನ ಮಾಡುವ ಸಂಪ್ರದಾಯ ಗ್ರಾಮಸ್ಥರಲ್ಲಿ ಇದೆ ಎಂಬ ಬಗ್ಗೆ ಮಾಹಿತಿ ದೊರೆತಿದೆ. ಆಗಸ್ಟ್ 3ರಂದು ಹಬ್ಬ ನಡೆದಿತ್ತು ಮತ್ತು ಸ್ಥಳೀಯರು ಮದ್ಯ ಸೇವಿಸಿದ್ದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>