<p><strong>ಹೈದರಾಬಾದ್</strong>: ‘ತೆಲಂಗಾಣವು ದೇಶದಲ್ಲೇ ಅತ್ಯಂತ ಕಡಿಮೆ ಭ್ರಷ್ಟಾಚಾರ ಇರುವ ರಾಜ್ಯ ಎಂದು ಕೇಂದ್ರ ಸರ್ಕಾರದ ವರದಿಯೊಂದು ಹೇಳಿದೆ’ ಎಂದು ಬಿಆರ್ಎಸ್ ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಹೇಳಿದ್ದಾರೆ.</p><p>ತೆಲಂಗಾಣ ಅತ್ಯಂತ ಭ್ರಷ್ಟ ರಾಜ್ಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಆರೋಪಕ್ಕೆ ಕವಿತಾ ಹೀಗೆ ತಿರುಗೇಟು ನೀಡಿದ್ದಾರೆ. </p><p>ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಕವಿತಾ, ರಾಹುಲ್ ಗಾಂಧಿ ವಿರುದ್ಧ ಮಾತಿನ ಪ್ರಹಾರ ಮಾಡಿದ್ದಾರೆ. ‘ರಾಹುಲ್ ಒಬ್ಬ ನಾಯಕ ಅಲ್ಲ, ಅವರು ಬರೆದುಕೊಟ್ಟಿದ್ದನ್ನು ಓದುವವರು. ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಬರುವ ಮುನ್ನ ಅವರು ಸರಿಯಾಗಿ ಹೋಂವರ್ಕ್ ಮಾಡಿಕೊಂಡು ಬರಬೇಕು’ ಎಂದು ಕವಿತಾ ಕುಟುಕಿದ್ದಾರೆ.</p><p>‘ನಮ್ಮ ತಂದೆ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಇತರ ರಾಜಕಾರಣಿಗಳಂತಲ್ಲ. ಅವರು ಚಳವಳಿಗಳಿಂದ ಬಂದವರು, ತಳಮಟ್ಟದಿಂದ ಬೆಳೆದು ನಾಯಕರಾದವರು. ಅವರಿಗೆ ಈ ರಾಜ್ಯದ ಜನರ ಕಷ್ಟಗಳ ಅರಿವಿದೆ. ರಾಜ್ಯದ ಒಟ್ಟು ಆಂತರಿಕ ಉತ್ಪನ್ನವು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಉತ್ತಮ ಮಟ್ಟದಲ್ಲಿ ಇದೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ‘ತೆಲಂಗಾಣವು ದೇಶದಲ್ಲೇ ಅತ್ಯಂತ ಕಡಿಮೆ ಭ್ರಷ್ಟಾಚಾರ ಇರುವ ರಾಜ್ಯ ಎಂದು ಕೇಂದ್ರ ಸರ್ಕಾರದ ವರದಿಯೊಂದು ಹೇಳಿದೆ’ ಎಂದು ಬಿಆರ್ಎಸ್ ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಹೇಳಿದ್ದಾರೆ.</p><p>ತೆಲಂಗಾಣ ಅತ್ಯಂತ ಭ್ರಷ್ಟ ರಾಜ್ಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಆರೋಪಕ್ಕೆ ಕವಿತಾ ಹೀಗೆ ತಿರುಗೇಟು ನೀಡಿದ್ದಾರೆ. </p><p>ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಕವಿತಾ, ರಾಹುಲ್ ಗಾಂಧಿ ವಿರುದ್ಧ ಮಾತಿನ ಪ್ರಹಾರ ಮಾಡಿದ್ದಾರೆ. ‘ರಾಹುಲ್ ಒಬ್ಬ ನಾಯಕ ಅಲ್ಲ, ಅವರು ಬರೆದುಕೊಟ್ಟಿದ್ದನ್ನು ಓದುವವರು. ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಬರುವ ಮುನ್ನ ಅವರು ಸರಿಯಾಗಿ ಹೋಂವರ್ಕ್ ಮಾಡಿಕೊಂಡು ಬರಬೇಕು’ ಎಂದು ಕವಿತಾ ಕುಟುಕಿದ್ದಾರೆ.</p><p>‘ನಮ್ಮ ತಂದೆ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಇತರ ರಾಜಕಾರಣಿಗಳಂತಲ್ಲ. ಅವರು ಚಳವಳಿಗಳಿಂದ ಬಂದವರು, ತಳಮಟ್ಟದಿಂದ ಬೆಳೆದು ನಾಯಕರಾದವರು. ಅವರಿಗೆ ಈ ರಾಜ್ಯದ ಜನರ ಕಷ್ಟಗಳ ಅರಿವಿದೆ. ರಾಜ್ಯದ ಒಟ್ಟು ಆಂತರಿಕ ಉತ್ಪನ್ನವು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಉತ್ತಮ ಮಟ್ಟದಲ್ಲಿ ಇದೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>