‘ಈ ಬೃಹತ್ ಹಣಕಾಸಿನ ಅವ್ಯವಹಾರಕ್ಕೆ ನಾಯ್ಡು ಅವರಿಗೆ ಕನಿಷ್ಠ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಎನ್ ಸಂಜಯ್ ಉತ್ತರಿಸಿದ್ದಾರೆ.
ಕೇಂದ್ರಗಳನ್ನು ತೆರೆಯುವಲ್ಲಿ ಹಾಗೂ ಸಾಮಗ್ರಿಗಳನ್ನು ಖರೀದಿಸುವಲ್ಲಿ ನಕಲಿ ಕಂಪನಿಗಳ ಹೆಸರಿನಲ್ಲಿ ನಕಲಿ ಬಿಲ್ಗಳನ್ನು ಸೃಷ್ಟಿಸಿ ವಂಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ ನಾವು ಟಿಡಿಪಿ ನಾಯಕರಾದ ನಾಯ್ಡು ಅವರನ್ನು ಬಂಧಿಸಿ ವಿಚಾರಣೆ ನಡೆಸುವುದು ತೀರಾ ಅವಶ್ಯವಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 ಅನ್ವಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎಡಿಜಿಪಿ ಹೇಳಿದ್ದಾರೆ.
ಇಂದು ಬೆಳಿಗ್ಗೆ 6 ಗಂಟೆಗೆ ನಂದ್ಯಾಲದಲ್ಲಿ ಆಂಧ್ರಪ್ರದೇಶದ ಸಿಐಡಿ ಪೊಲೀಸರು ನಾಯ್ಡು ಅವರನ್ನು ಬಂಧಿಸಿ ವಿಜಯವಾಡಕ್ಕೆ ಕರೆದೊಯ್ದಿದ್ದಾರೆ.
ಈ ಪ್ರಕರಣ ಇದೀಗ ವೈಎಸ್ಆರ್ ಕಾಂಗ್ರೆಸ್ ಹಾಗೂ ಟಿಡಿಪಿ ನಡುವೆ ರಾಜಕೀಯ ಸಮರಕ್ಕೆ ದೊಡ್ಡ ನಾಂದಿ ಹಾಡಿದೆ. ನಾಯ್ಡು ಬಂಧನದ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.