<p><strong>ನವದೆಹಲಿ</strong>: ಪಶ್ಚಿಮ ಬಂಗಾಳಕ್ಕೆ ಪಡಿತರ ಅಕ್ಕಿ ಖರೀದಿಗೆ ಎಂದು ನೀಡಬೇಕಿದ್ದ ₹7000 ಕೋಟಿ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಡೆಹಿಡಿದಿದ್ದರೇ ಎಂದು ಕಾಂಗ್ರೆಸ್ ಬುಧವಾರ ಪ್ರಶ್ನಿಸಿದೆ.</p>.<p>ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.</p>.<p>‘ಪಡಿತರ ಅಂಗಡಿಗಳ ಮುಂದೆ ಪ್ರಧಾನಿಯ ಫೋಟೊ ಪ್ರದರ್ಶಿಸುತ್ತಿಲ್ಲ ಎಂದು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಪಶ್ಚಿಮ ಬಂಗಾಳಕ್ಕೆ ನೀಡಬೇಕಿದ್ದ ₹7000 ಕೋಟಿಯನ್ನು ತಡೆಹಿಡಿಯಲಾಗಿತ್ತು’ ಎಂದು ತಿಳಿಸಿದ್ದಾರೆ.</p>.<p>ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ ಅವರು ಇತ್ತೀಚೆಗೆ ‘ಜಗನ್ನಾಥ ದೇವರು ಮೋದಿ ಅವರ ಭಕ್ತ’ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ‘ಜಗನ್ನಾಥ ತನ್ನ ಭಕ್ತ ಎಂದು ಮೋದಿ ಅವರು ನಂಬಿರುವರೇ? ಎಂದು ಪ್ರಶ್ನಿಸಿದ್ದಾರೆ.</p>.<p>ತನ್ನ ಬಗೆಗಿನ ಪ್ರಚಾರ ಮತ್ತು ಭಾರತದ ಮಕ್ಕಳಿಗೆ ಲಸಿಕೆ ಇವುಗಳಲ್ಲಿ ಯಾವುದು ಮುಖ್ಯ ಎಂದು ಪ್ರಧಾನಿ ತಿಳಿಸುವರೇ ಎಂದು ಪ್ರಶ್ನಿಸಿದ್ದಾರೆ.</p>.<p>‘ಪಶ್ಚಿಮ ಬಂಗಾಳವನ್ನು ಯಾಕೆ ಅವಹೇಳನ ಮಾಡುತ್ತಿದ್ದೀರಿ, ರಾಜ್ಯಕ್ಕೆ ನೀಡಬೇಕಿರುವ ನರೇಗಾ ಅನುದಾನವನ್ನು ಮೂರು ವರ್ಷಗಳಿಂದ ಯಾಕೆ ತಡೆಹಿಡಿದಿದ್ದೀರಿ’ ಎಂದಿದ್ದಾರೆ.</p>.<p>‘ರೀಮಲ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಮೋದಿ ಅವರು ಸೂಕ್ಷ್ಮತೆ ತೋರದೆ ಯಾಕೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಶ್ಚಿಮ ಬಂಗಾಳಕ್ಕೆ ಪಡಿತರ ಅಕ್ಕಿ ಖರೀದಿಗೆ ಎಂದು ನೀಡಬೇಕಿದ್ದ ₹7000 ಕೋಟಿ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಡೆಹಿಡಿದಿದ್ದರೇ ಎಂದು ಕಾಂಗ್ರೆಸ್ ಬುಧವಾರ ಪ್ರಶ್ನಿಸಿದೆ.</p>.<p>ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.</p>.<p>‘ಪಡಿತರ ಅಂಗಡಿಗಳ ಮುಂದೆ ಪ್ರಧಾನಿಯ ಫೋಟೊ ಪ್ರದರ್ಶಿಸುತ್ತಿಲ್ಲ ಎಂದು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಪಶ್ಚಿಮ ಬಂಗಾಳಕ್ಕೆ ನೀಡಬೇಕಿದ್ದ ₹7000 ಕೋಟಿಯನ್ನು ತಡೆಹಿಡಿಯಲಾಗಿತ್ತು’ ಎಂದು ತಿಳಿಸಿದ್ದಾರೆ.</p>.<p>ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ ಅವರು ಇತ್ತೀಚೆಗೆ ‘ಜಗನ್ನಾಥ ದೇವರು ಮೋದಿ ಅವರ ಭಕ್ತ’ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ‘ಜಗನ್ನಾಥ ತನ್ನ ಭಕ್ತ ಎಂದು ಮೋದಿ ಅವರು ನಂಬಿರುವರೇ? ಎಂದು ಪ್ರಶ್ನಿಸಿದ್ದಾರೆ.</p>.<p>ತನ್ನ ಬಗೆಗಿನ ಪ್ರಚಾರ ಮತ್ತು ಭಾರತದ ಮಕ್ಕಳಿಗೆ ಲಸಿಕೆ ಇವುಗಳಲ್ಲಿ ಯಾವುದು ಮುಖ್ಯ ಎಂದು ಪ್ರಧಾನಿ ತಿಳಿಸುವರೇ ಎಂದು ಪ್ರಶ್ನಿಸಿದ್ದಾರೆ.</p>.<p>‘ಪಶ್ಚಿಮ ಬಂಗಾಳವನ್ನು ಯಾಕೆ ಅವಹೇಳನ ಮಾಡುತ್ತಿದ್ದೀರಿ, ರಾಜ್ಯಕ್ಕೆ ನೀಡಬೇಕಿರುವ ನರೇಗಾ ಅನುದಾನವನ್ನು ಮೂರು ವರ್ಷಗಳಿಂದ ಯಾಕೆ ತಡೆಹಿಡಿದಿದ್ದೀರಿ’ ಎಂದಿದ್ದಾರೆ.</p>.<p>‘ರೀಮಲ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದ ಜನರು ಸಂಕಷ್ಟಕ್ಕೆ ಒಳಗಾಗಿದ್ದು, ಮೋದಿ ಅವರು ಸೂಕ್ಷ್ಮತೆ ತೋರದೆ ಯಾಕೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>