<p class="title"><strong>ನವದೆಹಲಿ:</strong>ಎಲ್ಗಾರ್ ಪರಿಷದ್–ಮಾವೊವಾದಿ ಸಂಪರ್ಕ ಪ್ರಕರಣದಲ್ಲಿ ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು ಗೃಹ ಬಂಧನದಲ್ಲಿರಿಸಲು ಗುರುವಾರ ಅನುಮತಿ ನೀಡಿರುವಸುಪ್ರೀಂ ಕೋರ್ಟ್,ವೈದ್ಯಕೀಯ ವರದಿ ತಿರಸ್ಕರಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿದೆ.</p>.<p class="title">ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠ 70 ವರ್ಷದ ಗೌತಮ್ ಅವರನ್ನು ಮುಂಬೈನಲ್ಲಿ ಒಂದು ತಿಂಗಳು ಗೃಹಬಂಧನದಲ್ಲಿರಿಸುವ ಆದೇಶವನ್ನು 48 ಗಂಟೆಗಳ ಒಳಗೆ ಜಾರಿಗೆ ತರಬೇಕು ಎಂದು ಹೇಳಿದೆ.</p>.<p class="title">ಪೊಲೀಸ್ ಸಿಬ್ಬಂದಿ ಲಭ್ಯವಿರುವಂತೆ ಮಾಡಲು ವೆಚ್ಚವಾಗಿ ಅಂದಾಜು ₹ 2.4 ಲಕ್ಷ ಠೇವಣಿ ಇಡುವಂತೆ ನವ್ಲಾಖಾಗೆ ಎನ್ಐಎ ನಿರ್ದೇಶನ ನೀಡಿದೆ.</p>.<p class="title">ಗೃಹಬಂಧನ ಅವಧಿಯಲ್ಲಿ ಕಂಪ್ಯೂಟರ್ ಮತ್ತು ಇಂಟರ್ನೆಟ್ ಬಳಸಲು ಅನುಮತಿ ನೀಡಿಲ್ಲ. ಟಿ.ವಿ ವೀಕ್ಷಣೆ ಮತ್ತು ದಿನಪತ್ರಿಕೆ ಓದಲು ಅವಕಾಶ ನೀಡಲಾಗಿದೆ.ಮುಂಬೈ ತೊರೆಯುವಂತಿಲ್ಲ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯಾವುದೇ ರೀತಿಯಲ್ಲಿ ಪ್ರಯತ್ನಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ.</p>.<p class="title">ಅರ್ಜಿದಾರರು ಎಲ್ಲಾ ಷರತ್ತುಗಳಿಗೆ ಬದ್ಧರಾಗಿರಬೇಕು. ನಿಯಮ ಉಲ್ಲಂಘಿಸಿದರೆ ಆದೇಶವನ್ನು ತಕ್ಷಣವೇ ರದ್ದುಗೊಳಿಸಬಹುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong>ಎಲ್ಗಾರ್ ಪರಿಷದ್–ಮಾವೊವಾದಿ ಸಂಪರ್ಕ ಪ್ರಕರಣದಲ್ಲಿ ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಅವರನ್ನು ಗೃಹ ಬಂಧನದಲ್ಲಿರಿಸಲು ಗುರುವಾರ ಅನುಮತಿ ನೀಡಿರುವಸುಪ್ರೀಂ ಕೋರ್ಟ್,ವೈದ್ಯಕೀಯ ವರದಿ ತಿರಸ್ಕರಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿದೆ.</p>.<p class="title">ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಹೃಷಿಕೇಶ್ ರಾಯ್ ಅವರ ಪೀಠ 70 ವರ್ಷದ ಗೌತಮ್ ಅವರನ್ನು ಮುಂಬೈನಲ್ಲಿ ಒಂದು ತಿಂಗಳು ಗೃಹಬಂಧನದಲ್ಲಿರಿಸುವ ಆದೇಶವನ್ನು 48 ಗಂಟೆಗಳ ಒಳಗೆ ಜಾರಿಗೆ ತರಬೇಕು ಎಂದು ಹೇಳಿದೆ.</p>.<p class="title">ಪೊಲೀಸ್ ಸಿಬ್ಬಂದಿ ಲಭ್ಯವಿರುವಂತೆ ಮಾಡಲು ವೆಚ್ಚವಾಗಿ ಅಂದಾಜು ₹ 2.4 ಲಕ್ಷ ಠೇವಣಿ ಇಡುವಂತೆ ನವ್ಲಾಖಾಗೆ ಎನ್ಐಎ ನಿರ್ದೇಶನ ನೀಡಿದೆ.</p>.<p class="title">ಗೃಹಬಂಧನ ಅವಧಿಯಲ್ಲಿ ಕಂಪ್ಯೂಟರ್ ಮತ್ತು ಇಂಟರ್ನೆಟ್ ಬಳಸಲು ಅನುಮತಿ ನೀಡಿಲ್ಲ. ಟಿ.ವಿ ವೀಕ್ಷಣೆ ಮತ್ತು ದಿನಪತ್ರಿಕೆ ಓದಲು ಅವಕಾಶ ನೀಡಲಾಗಿದೆ.ಮುಂಬೈ ತೊರೆಯುವಂತಿಲ್ಲ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಯಾವುದೇ ರೀತಿಯಲ್ಲಿ ಪ್ರಯತ್ನಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ.</p>.<p class="title">ಅರ್ಜಿದಾರರು ಎಲ್ಲಾ ಷರತ್ತುಗಳಿಗೆ ಬದ್ಧರಾಗಿರಬೇಕು. ನಿಯಮ ಉಲ್ಲಂಘಿಸಿದರೆ ಆದೇಶವನ್ನು ತಕ್ಷಣವೇ ರದ್ದುಗೊಳಿಸಬಹುದು ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>