ವಿಚಾರಣಾ ನ್ಯಾಯಾಲಯವು ಜೂನ್ 20ರಂದು ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಈ ಪ್ರಕಾರ ಕೇಜ್ರಿವಾಲ್ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಬೇಕಿತ್ತು. ಆದರೆ, ಕೇಜ್ರಿವಾಲ್ ಅವರ ಬಿಡುಗಡೆ ಪ್ರಶ್ನಿಸಿ, ಜಾರಿ ನಿರ್ದೇಶನಾಲಯವು (ಇ.ಡಿ) ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್ನ ರಜಾಕಾಲದ ಪೀಠವು, ಕೇಜ್ರಿವಾಲ್ ಅವರ ಬಿಡುಗಡೆಗೆ ತಡೆ ಹೇರಿತ್ತು.