‘ಶವಪರೀಕ್ಷೆ: ನಾಲ್ಕುಪಟ್ಟು ಹೆಚ್ಚಳ’
ಎಟಾ(ಉತ್ತರ ಪ್ರದೇಶ): ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯರು, ಸಾಮಾನ್ಯ ದಿನಗಳಲ್ಲಿ ನಡೆಸುವುದಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿನ ವೈದ್ಯರು ಶವಪರೀಕ್ಷೆಗಳನ್ನು ನಡೆಸಿದ್ದಾರೆ. ಇದು, ಕಾಲ್ತುಳಿತದಿಂದಾಗಿ ಸಂಭವಿಸಿದ ಪ್ರಾಣ ಹಾನಿ ಪ್ರಮಾಣವನ್ನು ತೋರಿಸುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಒತ್ತಡ ಹೆಚ್ಚಾಗಿ ಉಸಿರುಗಟ್ಟಿದ ಪರಿಣಾಮ ಬಹಳಷ್ಟು ಜನರು ಮೃತಪಟ್ಟಿರುವುದು ಶವಪರೀಕ್ಷೆಯಿಂದ ಗೊತ್ತಾಗಿದೆ ಎಂದು ಇಲ್ಲಿನ ಆಸ್ಪತ್ರೆಯ ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ ಡಾ.ರಾಮ ಮೋಹನ್ ತಿವಾರಿ ಹೇಳಿದ್ದಾರೆ. ‘ಮಂಗಳವಾರ ಫೂಲರಾಯ್ ಗ್ರಾಮದಿಂದ 27 ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿತ್ತು. ಮಧ್ಯರಾತ್ರಿ ಹೊತ್ತಿಗೆ 19 ದೇಹಗಳ ಮರಣೋತ್ತರ ಪರೀಕ್ಷೆ ಮುಗಿಸಿದ್ದ ಸಿಬ್ಬಂದಿ 20ನೇ ಶವಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು’ ಎಂದು ಹೇಳುವ ಮೂಲಕ ಅವರು ಅವಘಡದ ಭೀಕರತೆಯನ್ನು ಬಿಚ್ಚಿಟ್ಟರು.