ಈಗಾಗಲೇ ಈ ಘಟನೆ ಕುರಿತಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.
ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿಗಳು ಸಹ ನ್ಯಾಯಾಂಗ ತನಿಖೆ ನಡೆಸುವ ಸಮಿತಿಯಲ್ಲಿ ಇರುವರು. ಈ ದುರ್ಘಟನೆಗೆ ಕಾರಣವೇನು? ಯಾರು ಕಾರಣ ಎಂಬುದರ ಬಗ್ಗೆ ಸಮಿತಿ ಸಮಗ್ರವಾಗಿ ತನಿಖೆ ನಡೆಸಲಿದೆ ಎಂದು ಯೋಗಿ ಆದಿತ್ಯನಾಥ ಹೇಳಿದ್ದಾರೆ.
ಮೃತರ ಪೈಕಿ 6 ಮಂದಿ ಹೊರ ರಾಜ್ಯದವರು. ನಾಲ್ವರು ಹರಿಯಾಣ, ತಲಾ ಒಬ್ಬರು ಮಧ್ಯಪ್ರದೇಶ ಮತ್ತು ರಾಜಸ್ಥಾನದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈಗಾಗಲೇ ಸತ್ಸಂಗ ಕಾರ್ಯಕ್ರಮವನ್ನು ಸಂಘಟಿಸಿದ್ದ ಸಂಘಟಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಕಾರ್ಯಕ್ರಮಕ್ಕೆ 80 ಸಾವಿರ ಜನರಿಗೆ ಮಾತ್ರ ಅನುಮತಿ ನೀಡಲಾಗಿತ್ತು. ಆದರೆ ಸತ್ಸಂಗದಲ್ಲಿ 2.5 ಲಕ್ಷ ಜನರು ಬಂದಿದ್ದರು. ನಿರ್ಗಮನದ ದಾರಿ ಒಂದೇ ಇದುದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಗಳು ವರದಿ ಮಾಡಿವೆ.