ಜುಲೈ 2ರಂದು ಹಾಥರಸ್ನ ಫೂಲರಾಯ್ ಗ್ರಾಮದಲ್ಲಿ ನಡೆದ ಸತ್ಸಂಗದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 121 ಮಂದಿ ಮೃತಪಟ್ಟಿದ್ದರು. ದುರಂತದ ಬಗ್ಗೆ ತನಿಖೆ ನಡೆಸಿ, ವಿವರವಾದ ವರದಿ ಸಲ್ಲಿಸಲು ಮೂವರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಆಗ್ರಾ ವಲಯ) ಅನುಪಮ್ ಕುಲಶ್ರೇಷ್ಠ ಅವರು ಸಮಿತಿಯ ನೇತೃತ್ವ ವಹಿಸಿದ್ದಾರೆ.