<p><strong>ಬೆಂಗಳೂರು:</strong> ಇರಾನ್ ವಶದಲ್ಲಿರುವ ಸರಕು ಹಡಗಿನಲ್ಲಿರುವ 17 ಮಂದಿ ಭಾರತೀಯರನ್ನು ಬಿಡುಗಡೆ ಮಾಡುವ ಸಂಬಂಧ ಆ ದೇಶದ ವಿದೇಶಾಂಗ ಸಚಿವರ ಜತೆ ಮಾತನಾಡಿದ್ದು, ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಹೇಳಿದರು.</p> <p>ನಮ್ಮ ಮಾತುಕತೆ ಬಳಿಕ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಮುಂದಿನ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p> <p>ಭಾರತದ ಆತಂಕ ಅರ್ಥವಾಗುತ್ತದೆ ಎಂದು ಇರಾನ್ ವಿದೇಶಾಂಗ ಸಚಿವರು ನನಗೆ ಹೇಳಿದರು. ಹೀಗಾಗಿ ಬಿಡುಗಡೆ ವಿಶ್ವಾಸವಿದೆ. ಭಾರತದ ಒಳಗೂ, ಹೊರಗೂ ಪ್ರತಿಯೊಬ್ಬ ಭಾರತೀಯನ ರಕ್ಷಣೆ ಮೋದಿಯವರ ಗ್ಯಾರಂಟಿ ಎಂದೂ ಹೇಳಿದರು.</p> <p>ಮಧ್ಯ ಪ್ರಾಚ್ಯ ಭಾಗದಲ್ಲಿ 90 ಲಕ್ಷ ಭಾರತೀಯರು ವಾಸವಿದ್ದಾರೆ. ಅವರ ರಕ್ಷಣೆಯೇ ನಮ್ಮ ಬದ್ಧತೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ಮತ್ತು ಇರಾನ್ ಎರಡೂ ದೇಶಗಳ ಸಂಪರ್ಕದಲ್ಲಿ ಇದ್ದೇವೆ , ಸಂಘರ್ಷ ಬಿಟ್ಟು ಮಾತುಕತೆಗೆ ಸಲಹೆ ನೀಡಿದ್ದೇವೆ ಎಂದು ಜೈ.ಶಂಕರ್ ತಿಳಿಸಿದರು.</p>.ಇರಾನ್ ವಶದಲ್ಲಿರುವ ಹಡಗಿನ ಸಿಬ್ಬಂದಿ ಭೇಟಿಗೆ ಭಾರತದ ಅಧಿಕಾರಿಗಳಿಗೆ ಅವಕಾಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇರಾನ್ ವಶದಲ್ಲಿರುವ ಸರಕು ಹಡಗಿನಲ್ಲಿರುವ 17 ಮಂದಿ ಭಾರತೀಯರನ್ನು ಬಿಡುಗಡೆ ಮಾಡುವ ಸಂಬಂಧ ಆ ದೇಶದ ವಿದೇಶಾಂಗ ಸಚಿವರ ಜತೆ ಮಾತನಾಡಿದ್ದು, ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿದೆ ಎಂದು ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಹೇಳಿದರು.</p> <p>ನಮ್ಮ ಮಾತುಕತೆ ಬಳಿಕ ವಿದೇಶಾಂಗ ಇಲಾಖೆಯ ಅಧಿಕಾರಿಗಳು ಮುಂದಿನ ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.</p> <p>ಭಾರತದ ಆತಂಕ ಅರ್ಥವಾಗುತ್ತದೆ ಎಂದು ಇರಾನ್ ವಿದೇಶಾಂಗ ಸಚಿವರು ನನಗೆ ಹೇಳಿದರು. ಹೀಗಾಗಿ ಬಿಡುಗಡೆ ವಿಶ್ವಾಸವಿದೆ. ಭಾರತದ ಒಳಗೂ, ಹೊರಗೂ ಪ್ರತಿಯೊಬ್ಬ ಭಾರತೀಯನ ರಕ್ಷಣೆ ಮೋದಿಯವರ ಗ್ಯಾರಂಟಿ ಎಂದೂ ಹೇಳಿದರು.</p> <p>ಮಧ್ಯ ಪ್ರಾಚ್ಯ ಭಾಗದಲ್ಲಿ 90 ಲಕ್ಷ ಭಾರತೀಯರು ವಾಸವಿದ್ದಾರೆ. ಅವರ ರಕ್ಷಣೆಯೇ ನಮ್ಮ ಬದ್ಧತೆ. ಈ ಹಿನ್ನೆಲೆಯಲ್ಲಿ ಇಸ್ರೇಲ್ ಮತ್ತು ಇರಾನ್ ಎರಡೂ ದೇಶಗಳ ಸಂಪರ್ಕದಲ್ಲಿ ಇದ್ದೇವೆ , ಸಂಘರ್ಷ ಬಿಟ್ಟು ಮಾತುಕತೆಗೆ ಸಲಹೆ ನೀಡಿದ್ದೇವೆ ಎಂದು ಜೈ.ಶಂಕರ್ ತಿಳಿಸಿದರು.</p>.ಇರಾನ್ ವಶದಲ್ಲಿರುವ ಹಡಗಿನ ಸಿಬ್ಬಂದಿ ಭೇಟಿಗೆ ಭಾರತದ ಅಧಿಕಾರಿಗಳಿಗೆ ಅವಕಾಶ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>