<p><strong>ಶಿಮ್ಲಾ:</strong> ನಟಿ ಕಂಗನಾ ರನೌತ್ ಅವರ ರಾಜಕೀಯ ಪ್ರವೇಶದಿಂದ ಹಿಮಾಚಲ ಪ್ರದೇಶದ ಬಿಜೆಪಿ ನಾಯಕರ ಭವಿಷ್ಯದ ನಿರೀಕ್ಷೆಗಳಿಗೆ ತೊಂದರೆ ಉಂಟಾಗಲಿದೆ ಎಂದು ಲೋಕೋಪಯೋಗಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.</p>.<p>ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ಅವರನ್ನು ಪಕ್ಷ ಘೋಷಿಸಿದೆ. ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ನಟಿಯೊಬ್ಬರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.</p><p>ಕಳೆದ ವಾರ ಮನಾಲಿಯಲ್ಲಿ ಕಂಗನಾ ಮಾಡಿದ ಭಾಷಣವು, ರಾಜ್ಯ ಬಿಜೆಪಿ ನಾಯಕರು ಹಮೀರ್ಪುರನಲ್ಲಿ ನಡೆಸಿದ ಚುನಾವಣಾ ರ್ಯಾಲಿಯನ್ನು ಮಂಕಾಗಿಸಿದೆ. ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ನಾಯಕರನ್ನು ಮಂಕಾಗಿಸಿರುವ ಕಂಗನಾ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಭಯಗೊಂಡಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.</p><p>ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ವಿಕ್ರಮಾದಿತ್ಯ ಸಿಂಗ್ ಸೇರಿದಂತೆ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಕೆಲವು ಕುಟುಂಬಗಳ ವಿರುದ್ಧ ಕಂಗನಾ ವಾಗ್ದಾಳಿ ನಡೆಸಿದ್ದರು.</p><p>ಹಿಮಾಚಲ ಪ್ರದೇಶದಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ನಟಿ ಕಂಗನಾ ರನೌತ್ ಅವರ ರಾಜಕೀಯ ಪ್ರವೇಶದಿಂದ ಹಿಮಾಚಲ ಪ್ರದೇಶದ ಬಿಜೆಪಿ ನಾಯಕರ ಭವಿಷ್ಯದ ನಿರೀಕ್ಷೆಗಳಿಗೆ ತೊಂದರೆ ಉಂಟಾಗಲಿದೆ ಎಂದು ಲೋಕೋಪಯೋಗಿ ಸಚಿವ, ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಹೇಳಿದ್ದಾರೆ.</p>.<p>ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಂಗನಾ ಅವರನ್ನು ಪಕ್ಷ ಘೋಷಿಸಿದೆ. ಇದೇ ಮೊದಲ ಬಾರಿಗೆ ಹಿಮಾಚಲ ಪ್ರದೇಶದಲ್ಲಿ ನಟಿಯೊಬ್ಬರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.</p><p>ಕಳೆದ ವಾರ ಮನಾಲಿಯಲ್ಲಿ ಕಂಗನಾ ಮಾಡಿದ ಭಾಷಣವು, ರಾಜ್ಯ ಬಿಜೆಪಿ ನಾಯಕರು ಹಮೀರ್ಪುರನಲ್ಲಿ ನಡೆಸಿದ ಚುನಾವಣಾ ರ್ಯಾಲಿಯನ್ನು ಮಂಕಾಗಿಸಿದೆ. ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ನಾಯಕರನ್ನು ಮಂಕಾಗಿಸಿರುವ ಕಂಗನಾ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಭಯಗೊಂಡಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.</p><p>ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ವಿಕ್ರಮಾದಿತ್ಯ ಸಿಂಗ್ ಸೇರಿದಂತೆ ರಾಜಕೀಯದಲ್ಲಿ ಗುರುತಿಸಿಕೊಂಡಿರುವ ಕೆಲವು ಕುಟುಂಬಗಳ ವಿರುದ್ಧ ಕಂಗನಾ ವಾಗ್ದಾಳಿ ನಡೆಸಿದ್ದರು.</p><p>ಹಿಮಾಚಲ ಪ್ರದೇಶದಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>