ಆದರೆ, ವೈದ್ಯರು ಮಾತ್ರ ಸಭೆಯ ನೇರ ಪ್ರಸಾರದ ತಮ್ಮ ಬೇಡಿಕೆಗೆ ಪಟ್ಟು ಹಿಡಿದಿದ್ದಾರೆ.
‘ಸಭೆಯೆಲ್ಲಿ ಏನು ನಡೆಯುತ್ತಿದೆ ಎಂಬುದು ಸಾರ್ವಜನಿಕರಿಗೆ ತಿಳಿಯಲಿ ಎಂಬ ಉದ್ದೇಶದಿಂದ ನೇರ ಪ್ರಸಾರಕ್ಕೆ ನಾವು ಒತ್ತಾಯಿಸುತ್ತಿದ್ದೇವೆ. ಅದರಿಂದ ಸರ್ಕಾರಕ್ಕಾಗುವ ಸಮಸ್ಯೆ ಏನು ಎಂಬುದೇ ನಮಗೆ ಅರ್ಥವಾಗುತ್ತಿಲ್ಲ. ನಮ್ಮ ಐದೂ ಬೇಡಿಕೆಗಳು ಸಮರ್ಥನೀಯವಾದವುಗಳು. ಜನರೂ ನಮ್ಮ ಹೋರಾಟವನ್ನು ಬೆಂಬಲಿಸುತ್ತಿದ್ದಾರೆ. ಏಕೆಂದರೆ, ನಮ್ಮ ಹೋರಾಟದಲ್ಲಿ ರಾಜಕೀಯವಿಲ್ಲ. ಸರ್ಕಾರದ ಒತ್ತಡಕ್ಕೆ ನಾವು ಮಣಿದಿಲ್ಲ. ನಮ್ಮ ಬೇಡಿಕೆಗಳಿಗೆ ಒಪ್ಪದ ಹೊರತು ನಮ್ಮನ್ನು ಸಭೆಗೆ ಆಹ್ವಾನಿಸುವುದರಲ್ಲಿ ಅರ್ಥವೇ ಇಲ್ಲ’ ಎಂದು ಪ್ರತಿಭಟನಾನಿರತ ವೈದ್ಯರು ತಿಳಿಸಿದ್ದಾರೆ.
ಕೋಲ್ಕತ್ತದ ಆರೋಗ್ಯ ಇಲಾಖೆಯ ಕೇಂದ್ರ ಕಚೇರಿ ಸ್ವಾಸ್ಥ್ಯ ಭವನದ ಎದುರು ವೈದ್ಯರು ಪ್ರತಿಭಟನೆ ಮುಂದುವರಿಸಿದ್ದಾರೆ.
ವೈದ್ಯರ ಪ್ರತಿಭಟನೆಯಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜ್ಯದಲ್ಲಿ 29 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸೆಪ್ಟೆಂಬರ್ 13ರಂದು ಮಮತಾ ಬ್ಯಾನರ್ಜಿ ಹೇಳಿದ್ದರು.