ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನವೇ ಮಹಾರಾಷ್ಟ್ರದಲ್ಲಿ ಈ ಬೆಳವಣಿಗೆ ನಡೆದಿದೆ.
‘ಮಹಾವಿಕಾಸ ಅಘಾಡಿಯ ಮೈತ್ರಿಕೂಟಕ್ಕೆ ವಿಬಿಎ ಸೇರ್ಪಡೆಗೆ ಕಾಂಗ್ರೆಸ್, ಎನ್ಸಿಪಿ ಮತ್ತು ಶಿವಸೇನಾ ಪಕ್ಷಗಳು ಒಕ್ಕೊರಲಿನಿಂದ ನಿರ್ಧರಿಸಿವೆ. ಸರ್ವಾಧಿಕಾರ ವಿರುದ್ಧದ ಹೋರಾಟಕ್ಕೆ ನಿಮ್ಮ ಬೆಂಬಲಕ್ಕೆ ಧನ್ಯವಾದಗಳು’ ಎಂದು ಮಹಾರಾಷ್ಟ್ರದ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.
ಅಂಬೇಡ್ಕರ್ ಅವರ ಮೊಮ್ಮಗ ಆಗಿರುವ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಿಬಿಎ ಪಕ್ಷವು ವಿದರ್ಭ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ತನ್ನ ಪ್ರಭಾವ ಹೊಂದಿದೆ.