ಮೃತ ವ್ಯಕ್ತಿಯನ್ನು ದೆಹಲಿಯ ಚವರಿ ಬಜಾರ್ ನಿವಾಸಿ ಸುನೀಲ್ ಗುಪ್ತಾ ಎಂದು ಗುರುತಿಸಲಾಗಿದೆ. ಗುಪ್ತಾ ಅವರು ಕಳೆದ ಕೆಲವು ವರ್ಷಗಳಿಂದ ಕ್ಷಯರೋಗದಿಂದ ಬಳಲುತ್ತಿದ್ದು, ಈಗಾಗಲೇ ಚಿಕಿತ್ಸೆಗಾಗಿ ₹6 ಲಕ್ಷ ಖರ್ಚು ಮಾಡಿದ್ದರು ಎಂದು ಸಂತ್ರಸ್ತರ ಸಹೋದರ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
‘ಕಾಶ್ಮೀರಿ ಗೇಟ್ ಮೆಟ್ರೊ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಹಳಿಗೆ ಹಾರಿದ್ದು, ದೆಹಲಿಯ ರಿಥಾಲಾದಿಂದ ಘಾಜಿಯಾಬಾದ್ನ ಶಹೀದ್ ಸ್ಥಲ್ಗೆ ಸಂಪರ್ಕ ಕಲ್ಪಿಸುವ ಕೆಂಪು ಮಾರ್ಗದ ಸೇವೆಯಲ್ಲಿ ವಿಳಂಬವಾಗಲಿದೆ. ಇತರ ಎಲ್ಲಾ ಮಾರ್ಗಗಳಲ್ಲಿಯೂ ಸಾಮಾನ್ಯ ಸೇವೆ ಇರಲಿದೆ’ ಎಂದು ದೆಹಲಿ ಮೆಟ್ರೊ ರೈಲು ನಿಗಮ (ಡಿಎಂಆರ್ಸಿ) ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.