ಚೆನ್ನೈ: ತಮಿಳುನಾಡಿನ ಸಚಿವ, ಬಂಧನದಲ್ಲಿರುವ ವಿ ಸೆಂಥಿಲ್ ಬಾಲಾಜಿ ಅವರ ಹೇಬಿಯಸ್ ಕಾರ್ಪಸ್ ಅರ್ಜಿಯ(ಎಚ್ಸಿಪಿ) ಕುರಿತು ಮದ್ರಾಸ್ ಹೈಕೋರ್ಟ್ನ ವಿಭಾಗೀಯ ಪೀಠ ಮಂಗಳವಾರ ಭಿನ್ನ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಜೆ ನಿಶಾ ಬಾನು ಮತ್ತು ಡಿ ಭರತ ಚಕ್ರವರ್ತಿ ಅವರನ್ನೊಳಗೊಂಡ ಪೀಠ ಈ ಬಗ್ಗೆ ತೀರ್ಪು ಪ್ರಕಟಿಸಿತು.
ತನ್ನ ಪತಿಯನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಬಾಲಾಜಿ ಪತ್ನಿ ಸಲ್ಲಿಸಿದ್ದ ಅರ್ಜಿಯ ಪರವಾಗಿ ತೀರ್ಪಿತ್ತ ನ್ಯಾಯಮೂರ್ತಿ ನಿಶಾ ಬಾನು ಅವರು, ಬಾಲಾಜಿ ಅವರನ್ನು ಮುಕ್ತಗೊಳಿಸಬೇಕೆಂದು ಹೇಳಿದರು. ಆದರೆ, ಮತ್ತೊಬ್ಬ ನ್ಯಾಯಮೂರ್ತಿಗಳು ಇದನ್ನು ಒಪ್ಪಲಿಲ್ಲ. ನಂತರ, ವಿಭಾಗೀಯ ಪೀಠವು ಈ ವಿಷಯದ ವಿಚಾರಣೆಯನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸಲು ಮುಖ್ಯ ನ್ಯಾಯಮೂರ್ತಿಗಳಿಗೆ ಶಿಫಾರಸು ಮಾಡಲು ನಿರ್ಧರಿಸಿದೆ.
ಹಿಂದಿನ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದಾಗ ಉದ್ಯೋಗಕ್ಕಾಗಿ ಹಣ ಹಗರಣಕ್ಕೆ ಸಂಬಂಧಿಸಿದಂತೆ ಬಾಲಾಜಿ ಅವರನ್ನು ಜೂನ್ 14ರಂದು ಇ.ಡಿ ಬಂಧಿಸಿತ್ತು.