<p><strong>ತಿರುವನಂತಪುರ:</strong> ಲೋಕಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಫೆ. 27ರಂದು ಕೇರಳಕ್ಕೆ ಆಗಮಿಸಲಿದ್ದಾರೆ. ಇದು ಈ ವರ್ಷದಲ್ಲಿ ಅವರು ರಾಜ್ಯಕ್ಕೆ ಕೈಗೊಳ್ಳುವ ಮೂರನೇ ಪ್ರವಾಸವಾಗಿದೆ.</p><p>ಮಂಗಳವಾರ ರಾಜ್ಯ ರಾಜಧಾನಿ ತಿರುವನಂತಪುರಕ್ಕೆ ಆಗಮಿಸುವ ಅವರು, ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಇಲ್ಲಿನ ಸೆಂಟ್ರಲ್ ಮೈದಾನದಲ್ಲಿ ನಡೆಯುವ ರಾಜ್ಯ ಬಿಜೆಪಿ ಘಟಕದ ರಾಜ್ಯವ್ಯಾಪಿ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.ಮೋದಿ ಸರ್ಕಾರದ ದುರಾಡಳಿತದಿಂದ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ: ಕಾಂಗ್ರೆಸ್.<p>ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಅವರ ನೇತೃತ್ವದಲ್ಲಿ ಕಾಸರಗೋಡಿನಿಂದ ಜನವರಿ 27ರಂದು ಈ ಪಾದಯಾತ್ರೆ ಆರಂಭವಾಗಿತ್ತು.</p><p>ಈ ಹಿಂದೆ ಜ.3ರಂದು ತ್ರಿಶ್ಶೂರ್ಗೆ ಬಂದಿದ್ದ ಪ್ರಧಾನಿ ಮೋದಿ, ರೋಡ್ ಶೋ ನಡೆಸಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. </p>.ಇಂಡಿಯಾ ಮೈತ್ರಿಕೂಟದ ನಾಯಕರು ಜಾತಿ ಹೆಸರಿನಲ್ಲಿ ಜನರನ್ನು ಪ್ರಚೋದಿಸುತ್ತಾರೆ: ಮೋದಿ. <p>ಆದಾದ ಬಳಿಕ ಜನವರಿ 16–17ರಂದು ರಾಜ್ಯದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲಿ ನಡೆದ ನಟ, ರಾಜಕಾರಣಿ ಸುರೇಶ್ ಗೋಪಿ ಅವರ ಮಗಳ ವಿವಾಹ ಸಮಾರಂಭದಲ್ಲೂ ಭಾಗಿಯಾಗಿದ್ದರು. </p><p>ನಂತರ ತ್ರಿಶ್ಶೂರ್ನ ತ್ರಿಪ್ರಯಾರ್ ಶ್ರೀರಾಮ ದೇಗುಲಕ್ಕೆ ಭೇಟಿ ನೀಡಿದ್ದರು. ಬಳಿಕ ಕೊಚ್ಚಿಗೆ ಪ್ರಯಾಣ ಬೆಳೆಸಿ ಅಲ್ಲಿ ಕೇಂದ್ರ ಸರ್ಕಾರ ಹಾಗೂ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.ಇಂಡಿಯಾ ಮೈತ್ರಿಕೂಟದ ನಾಯಕರು ಜಾತಿ ಹೆಸರಿನಲ್ಲಿ ಜನರನ್ನು ಪ್ರಚೋದಿಸುತ್ತಾರೆ: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಲೋಕಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಫೆ. 27ರಂದು ಕೇರಳಕ್ಕೆ ಆಗಮಿಸಲಿದ್ದಾರೆ. ಇದು ಈ ವರ್ಷದಲ್ಲಿ ಅವರು ರಾಜ್ಯಕ್ಕೆ ಕೈಗೊಳ್ಳುವ ಮೂರನೇ ಪ್ರವಾಸವಾಗಿದೆ.</p><p>ಮಂಗಳವಾರ ರಾಜ್ಯ ರಾಜಧಾನಿ ತಿರುವನಂತಪುರಕ್ಕೆ ಆಗಮಿಸುವ ಅವರು, ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಇಲ್ಲಿನ ಸೆಂಟ್ರಲ್ ಮೈದಾನದಲ್ಲಿ ನಡೆಯುವ ರಾಜ್ಯ ಬಿಜೆಪಿ ಘಟಕದ ರಾಜ್ಯವ್ಯಾಪಿ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.ಮೋದಿ ಸರ್ಕಾರದ ದುರಾಡಳಿತದಿಂದ ಆರ್ಥಿಕ ಅಭಿವೃದ್ಧಿ 20 ವರ್ಷ ಹಿಂದಕ್ಕೆ: ಕಾಂಗ್ರೆಸ್.<p>ಕೇರಳ ಬಿಜೆಪಿ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಅವರ ನೇತೃತ್ವದಲ್ಲಿ ಕಾಸರಗೋಡಿನಿಂದ ಜನವರಿ 27ರಂದು ಈ ಪಾದಯಾತ್ರೆ ಆರಂಭವಾಗಿತ್ತು.</p><p>ಈ ಹಿಂದೆ ಜ.3ರಂದು ತ್ರಿಶ್ಶೂರ್ಗೆ ಬಂದಿದ್ದ ಪ್ರಧಾನಿ ಮೋದಿ, ರೋಡ್ ಶೋ ನಡೆಸಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. </p>.ಇಂಡಿಯಾ ಮೈತ್ರಿಕೂಟದ ನಾಯಕರು ಜಾತಿ ಹೆಸರಿನಲ್ಲಿ ಜನರನ್ನು ಪ್ರಚೋದಿಸುತ್ತಾರೆ: ಮೋದಿ. <p>ಆದಾದ ಬಳಿಕ ಜನವರಿ 16–17ರಂದು ರಾಜ್ಯದ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲಿ ನಡೆದ ನಟ, ರಾಜಕಾರಣಿ ಸುರೇಶ್ ಗೋಪಿ ಅವರ ಮಗಳ ವಿವಾಹ ಸಮಾರಂಭದಲ್ಲೂ ಭಾಗಿಯಾಗಿದ್ದರು. </p><p>ನಂತರ ತ್ರಿಶ್ಶೂರ್ನ ತ್ರಿಪ್ರಯಾರ್ ಶ್ರೀರಾಮ ದೇಗುಲಕ್ಕೆ ಭೇಟಿ ನೀಡಿದ್ದರು. ಬಳಿಕ ಕೊಚ್ಚಿಗೆ ಪ್ರಯಾಣ ಬೆಳೆಸಿ ಅಲ್ಲಿ ಕೇಂದ್ರ ಸರ್ಕಾರ ಹಾಗೂ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.ಇಂಡಿಯಾ ಮೈತ್ರಿಕೂಟದ ನಾಯಕರು ಜಾತಿ ಹೆಸರಿನಲ್ಲಿ ಜನರನ್ನು ಪ್ರಚೋದಿಸುತ್ತಾರೆ: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>