ಈ ಪ್ರಕರಣದಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿ 300 ಪದಗಳ ಪ್ರಬಂಧ ಬರೆಯಲು ಸೇರಿದಂತೆ ಇನ್ನಿತರ ಕಠಿಣವಲ್ಲದ ನಿಯಮಗಳೊಂದಿಗೆ ಕಾನೂನು ಸಂಘರ್ಷಕ್ಕೆ ಸಿಲುಕಿದ ಬಾಲಕನಿಗೆ ಜೆಜೆಬಿಯು ಜಾಮೀನು ಮಂಜೂರು ಮಾಡಿತ್ತು. ಈ ಕ್ರಮವು ರಾಷ್ಟ್ರಮಟ್ಟದಲ್ಲಿ ಟೀಕೆಗೆ ಗುರಿಯಾಗಿತ್ತು. ಈ ಕುರಿತು ತನಿಖೆಗೆ ರಚಿಸಲಾಗಿದ್ದ ಐವರು ಸದಸ್ಯರ ಸಮಿತಿಯು ತನ್ನ ವರದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಯುಕ್ತರಿಗೆ ಶುಕ್ರವಾರ ಸಲ್ಲಿಸಿದೆ.