ಆರ್.ಜಿ. ಕರ್ ಕಾಲೇಜಿನ ಸಭಾಂಗಣದಲ್ಲಿ ಆ.9ರಂದು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಅತ್ಯಾಚಾರ ಮತ್ತು ಆಕೆಯ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ, ಕಾಲೇಜಿನಲ್ಲಿ ಅವ್ಯವಹಾರ ನಡೆದಿರುವ ಆರೋಪವು ಕೇಳಿ ಬಂದಿತ್ತು.
ಸಂದೀಪ್ ಘೋಷ್ ಅವಧಿಯಲ್ಲಿ ಆರ್.ಜಿ. ಕರ್ ಆಸ್ಪತ್ರೆ ಮತ್ತು ಕಾಲೇಜಿನಲ್ಲಿ ಅವ್ಯವಹಾರ ನಡೆದಿದೆ ಎಂದು ಅಲ್ಲಿನ ಮಾಜಿ ಅಧಿಕಾರಿಯೊಬ್ಬರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು.