<p><strong>ಧನ್ಬಾದ್:</strong> ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆ ಜಾರ್ಖಂಡ್ನ ಧನ್ಬಾದ್ನಲ್ಲಿ ಇಂದು 3 ನೇ ದಿನದ ರ್ಯಾಲಿ ಆರಂಭಿಸಿದೆ. </p><p>ಧನ್ಬಾದ್ ನಗರದ ಗೋವಿಂದಪುರದಲ್ಲಿ ಯಾತ್ರೆ ಪುನರಾರಂಭವಾಗಿದ್ದು, ಮುಂದಿನ ಪಯಣ ಬೊಕಾರೊದೆಡೆಗೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ.</p><p>ಎರಡು ಹಂತಗಳಲ್ಲಿ ಎಂಟು ದಿನಗಳ ಕಾಲ ಜಾರ್ಖಂಡ್ ರಾಜ್ಯದ 13 ಜಿಲ್ಲೆಗಳಲ್ಲಿ 804 ಕಿ.ಮೀ ಯಾತ್ರೆ ಸಂಚರಿಸಲಿದೆ.</p><p>ಭಿಲಾಯ್, ರೂರ್ಕೆಲಾ, ದುರ್ಗಾಪುರ, ಭಾಕ್ರಾ ನಂಗಲ್, ಬೊಕಾರೊ, ಧನ್ಬಾದ್, ಬರೌನಿ, ಸಿಂದ್ರಿ ಈ ಪ್ರದೇಶಗಳಲ್ಲಿನ ಸ್ಮಾರಕಗಳೆಲ್ಲವೂ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ನಿರ್ಮಿಸಿದ್ದಾಗಿದೆ. ಇವೆಲ್ಲವೂ ಭಾರತದ ಆರ್ಥಿಕ ಅಭಿವೃದ್ಧಿಯ ಸ್ಮಾರಕಗಳಾಗಿವೆ. 70 ವರ್ಷಗಳಲ್ಲಿ ನಾವು (ಕಾಂಗ್ರೆಸ್) ಏನು ಮಾಡಿದ್ದೇವೆ ಎನ್ನುವುದಕ್ಕೆ ಉತ್ತರವಿದು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.</p><p>ಭಾರತ್ ಜೋಡೊ ನ್ಯಾಯ ಯಾತ್ರೆ ಭಾಗವಾಗಿ ರಾಹುಲ್ ಗಾಂಧಿ, ಶನಿವಾರ ಬಾಬಾ ಬೈದ್ಯನಾಥ ಧಾಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.</p>.ಜಾರ್ಖಂಡ್ನಲ್ಲಿ ಬಿಜೆಪಿ ಪಿತೂರಿಗೆ ‘ಇಂಡಿಯಾ’ ಜವಾಬು: ರಾಹುಲ್ ಗಾಂಧಿ.ಜಾರ್ಖಂಡ್ | ಬೈದ್ಯನಾಥ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧನ್ಬಾದ್:</strong> ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ನ್ಯಾಯ ಯಾತ್ರೆ ಜಾರ್ಖಂಡ್ನ ಧನ್ಬಾದ್ನಲ್ಲಿ ಇಂದು 3 ನೇ ದಿನದ ರ್ಯಾಲಿ ಆರಂಭಿಸಿದೆ. </p><p>ಧನ್ಬಾದ್ ನಗರದ ಗೋವಿಂದಪುರದಲ್ಲಿ ಯಾತ್ರೆ ಪುನರಾರಂಭವಾಗಿದ್ದು, ಮುಂದಿನ ಪಯಣ ಬೊಕಾರೊದೆಡೆಗೆ ಎಂದು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹೇಳಿದ್ದಾರೆ.</p><p>ಎರಡು ಹಂತಗಳಲ್ಲಿ ಎಂಟು ದಿನಗಳ ಕಾಲ ಜಾರ್ಖಂಡ್ ರಾಜ್ಯದ 13 ಜಿಲ್ಲೆಗಳಲ್ಲಿ 804 ಕಿ.ಮೀ ಯಾತ್ರೆ ಸಂಚರಿಸಲಿದೆ.</p><p>ಭಿಲಾಯ್, ರೂರ್ಕೆಲಾ, ದುರ್ಗಾಪುರ, ಭಾಕ್ರಾ ನಂಗಲ್, ಬೊಕಾರೊ, ಧನ್ಬಾದ್, ಬರೌನಿ, ಸಿಂದ್ರಿ ಈ ಪ್ರದೇಶಗಳಲ್ಲಿನ ಸ್ಮಾರಕಗಳೆಲ್ಲವೂ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ನಿರ್ಮಿಸಿದ್ದಾಗಿದೆ. ಇವೆಲ್ಲವೂ ಭಾರತದ ಆರ್ಥಿಕ ಅಭಿವೃದ್ಧಿಯ ಸ್ಮಾರಕಗಳಾಗಿವೆ. 70 ವರ್ಷಗಳಲ್ಲಿ ನಾವು (ಕಾಂಗ್ರೆಸ್) ಏನು ಮಾಡಿದ್ದೇವೆ ಎನ್ನುವುದಕ್ಕೆ ಉತ್ತರವಿದು ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.</p><p>ಭಾರತ್ ಜೋಡೊ ನ್ಯಾಯ ಯಾತ್ರೆ ಭಾಗವಾಗಿ ರಾಹುಲ್ ಗಾಂಧಿ, ಶನಿವಾರ ಬಾಬಾ ಬೈದ್ಯನಾಥ ಧಾಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.</p>.ಜಾರ್ಖಂಡ್ನಲ್ಲಿ ಬಿಜೆಪಿ ಪಿತೂರಿಗೆ ‘ಇಂಡಿಯಾ’ ಜವಾಬು: ರಾಹುಲ್ ಗಾಂಧಿ.ಜಾರ್ಖಂಡ್ | ಬೈದ್ಯನಾಥ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>