ನನ್ನ ಪಕ್ಷ ಅಥವಾ ಅವರ ಪಕ್ಷ ಅಥವಾ ಯಾವುದೇ ಪಕ್ಷದ ಯಾವುದೇ ನಾಯಕರು ದೇಶ ವಿಭಜನೆಯ ಹೇಳಿಕೆ ನೀಡಿದರೆ ಒಪ್ಪಲು ಸಾಧ್ಯವಿಲ್ಲ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಒಂದೇ. ನಾವು ಒಂದೇ ದೇಶವಾಗಿ ಉಳಿಯುತ್ತೇವೆ.
–ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ವಿರೋಧಪಕ್ಷದ ನಾಯಕ
ಸಂವಿಧಾನಕ್ಕೂ ಅಂಬೇಡ್ಕರ್ ಅವರಿಗೂ ಘೋರ ಅವಮಾನ ಮಾಡಿರುವ ಸುರೇಶ್ ವಿರುದ್ಧ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳದೇ ಹೋದಲ್ಲಿ ದೇಶವನ್ನು ಛಿದ್ರಗೊಳಿಸುವ ಹೇಳಿಕೆಗೆ ಕಾಂಗ್ರೆಸ್ ಬೆಂಬಲವೂ ಇದೆ ಎಂದು ಭಾವಿಸಬೇಕಾಗುತ್ತದೆ.