‘ಬಿಜೆಪಿ ಟಿಕೆಟ್ನಿಂದ ಸ್ಪರ್ಧಿಸಿ, ಮುಕುಲ್ ರಾಯ್ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಅವರು ಟಿಎಂಸಿಗೆ ಸೇರ್ಪಡೆಯಾಗಿದ್ದು, ಪಕ್ಷಾಂತರ ನಿಷೇಧ ಕಾಯ್ದೆ ಪ್ರಕಾರ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು. ಈಗ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸ್ಪೀಕರ್ ಅವರಿಗೆ ಅರ್ಜಿ ಸಲ್ಲಿಸಲಾಗಿದೆ’ ಎಂದು ಬಿಜೆಪಿ ಶಾಸಕ ಮನೋಜ್ ಟಿಗ್ಗಾ ತಿಳಿಸಿದರು.