‘ಸಂತ್ರಸ್ತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಸಾಲ ಮನ್ನಾ ಮಾಡುವುದರಿಂದ ಬ್ಯಾಂಕ್ಗಳಿಗೆ ತಡೆಯಲಾರದ ಹೊರೆ ಉಂಟಾಗಲಾರದು’ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ರಾಜ್ಯ ಮಟ್ಟದ ಬ್ಯಾಂಕರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಬಡ್ಡಿದರದಲ್ಲಿ ಸಡಿಲಿಕೆ ಅಥವಾ ಸಾಲ ಮರುಪಾವತಿ ಅವಧಿ ವಿಸ್ತರಣೆ ಮುಂತಾದವುಗಳು ಭೂಕುಸಿತ ಸಂತ್ರಸ್ತರಿಗೆ ಪರಿಹಾರವಲ್ಲ. ಸಾಲ ಪಡೆದುಕೊಂಡ ಹಲವು ಮಂದಿ ಸಾವಿಗೀಡಾಗಿದ್ದಾರೆ. ದುರಂತದಿಂದಾಗಿ ಅವರ ಭೂಮಿ ಬಳಕೆಗೆ ಮಾಡಲು ಆಗದಂತೆ ಆಗಿದೆ. ‘ದುರಂತದಿಂದ ತೊಂದರೆಗೊಳಗಾದ ಜನರ ಸಂಪೂರ್ಣ ಸಾಲ ಮನ್ನಾ ಮಾಡುವುದು ನಿಮ್ಮಿಂದ ಸಾಧ್ಯವಿದೆ’ ಎಂದು ಪಿಣರಾಯಿ ಹೇಳಿದ್ದಾರೆ.