ಪ್ರಧಾನಿ ಅವರ ವಿದೇಶ ಪ್ರವಾಸ ಕುರಿತು ಟೀಕಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ‘ಜೈವಿಕವಾಗಿ ಹುಟ್ಟುಪಡೆದಿಲ್ಲದ ಪ್ರಧಾನಿ ಮೋದಿ ಅವರ ಬ್ರೂನೈ ಭೇಟಿಯನ್ನು ಐತಿಹಾಸಿಕ ಎಂದು ಬಿಂಬಿಸಲಾಗುತ್ತಿದೆ, ನಂತರ ಅವರು ಸಿಂಗಪುರಕ್ಕೆ ಹೋಗುತ್ತಾರೆ. ಹೀಗೆ ಆಗಾಗ ವಿದೇಶಕ್ಕೆ ಪ್ರಯಾಣಿಸುವವರು ತೊಂದರೆಗೊಳಗಾದ ಮಣಿಪುರದ ರಾಜ್ಯಕ್ಕೆ ಮಾನವೀಯ ಭೇಟಿಯನ್ನು ಯಾವಾಗ ಮಾಡುತ್ತಾರೆ’ ಎಂದು ಪ್ರಶ್ನಿಸಿದ್ದಾರೆ.
ಮಣಿಪುರದಲ್ಲಿ ಹಿಂಸಾಚಾರ ಆರಂಭವಾಗಿ ಇಂದಿಗೆ 16 ತಿಂಗಳು ಕಳೆದಿದೆ. ಇಲ್ಲಿ ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪರಿಹಾರ ಶಿಬಿರಗಳಲ್ಲಿ ನಿರ್ಗತಿಕರಾಗಿ ಬದುಕುತ್ತಿದ್ದಾರೆ. ಇಂದಿಗೂ ಪರಿಸ್ಥಿತಿ ಶಾಂತವಾಗಿಲ್ಲ. ಆದರೆ ಪ್ರಧಾನಿ ಮೋದಿ ಅವರಿಗೆ ಇನ್ನೂ ಮಣಿಪುರಕ್ಕೆ ತೆರಳಿ ತೊಂದರೆಗೊಳಗಾದವರನ್ನು ಭೇಟಿಯಾಗಿ ಸಂವಹನ ನಡೆಸಲು ಸಮಯ ಸಿಕ್ಕಿಲ್ಲ. ಮಣಿಪುರ ಮುಖ್ಯಮಂತ್ರಿ ಎಲ್ಲಾ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ. ಅವರಿಂದ ಪರಿಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ ಎಂದು ಜೈರಾಮ್ ರಮೇಶ್ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.