ಈ ಸಂಬಂಧ ನವೆಂಬರ್ 6ರಂದು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಪಡೆಯ ಮುಖ್ಯಸ್ಥರಿಗೆ (ಪಿಸಿಸಿಎಫ್) ಅವರಿಗೆ ಪತ್ರ ಬರೆದಿರುವ ಸಚಿವಾಲಯದ ಉಪ ಮಹಾನಿರೀಕ್ಷಕ ಎಂ.ಕೆ. ಶಂಭು, ‘ಅರಣ್ಯ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಹಾಗೂ ಭೂ ಅಕ್ರಮದ ಬಗ್ಗೆ ಹಾಸನದ ಡಿಸಿಎಫ್ ವರದಿ ನೀಡಿದ್ದಾರೆ. ಈ ಸಂಬಂಧ ಒಂದು ತಿಂಗಳ ಒಳಗೆ ವಾಸ್ತವಾಂಶದ ವರದಿ ಸಲ್ಲಿಸಬೇಕು. ಇಲ್ಲದಿದ್ದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದ್ದಾರೆ.