ಅತ್ಯಾಚಾರದ ಆರೋಪದಡಿ ಎಸ್ ಐ ಟಿ ಕಸ್ಟಡಿಯಲ್ಲಿರುವ ಮಾಜಿ ಸಂಸದ ಪ್ರಜ್ವಲ್ ಅವರನ್ನು ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೇ 10ರವರೆಗೆ ಪುನಃ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಮೊದಲು ನೀಡಿದ್ದ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಗುರುವಾರ ಮಧ್ಯಾಹ್ನ 3 ಗಂಟೆಗೆ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ವಕೀಲ ಅಶೋಕ್ ನಾಯಕ್ ಅವರು ಆರೋಪಿಯ ಕಸ್ಟಡಿ ವಿಸ್ತರಿಸುವಂತೆ ಮಾಡಿದ ಮನವಿಯನ್ನು ಎಸಿಎಂಎಂ 42ನೇ ನ್ಯಾಯಾಲಯದ ನ್ಯಾಯಾಧೀಶ ಕೆ.ಎಂ.ಶಿವಕುಮಾರ್ ಮನ್ನಿಸಿ ಈ ಕುರಿತಂತೆ ಆದೇಶಿಸಿದರು.