ಜೂನ್ 8ರ ಮಧ್ಯಾಹ್ನ ಚಿತ್ರದುರ್ಗದಿಂದ ರೇಣುಕಸ್ವಾಮಿ ಅವರನ್ನು ಅಪಹರಿಸಿ ನಗರದ ಪಟ್ಟಣಗೆರೆಯ ಶೆಡ್ಗೆ ಕರೆತಂದಿದ್ದ ಆರೋಪಿಗಳು, ಬ್ಯಾಟ್ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದರು. ಎಲೆಕ್ಟ್ರಿಕ್ ಶಾಕ್ ನೀಡಿ ಹತ್ಯೆ ಮಾಡಿದ್ದರು. ನಂತರ, ರಾಜಕಾಲುವೆಗೆ ಮೃತದೇಹ ಎಸೆದಿದ್ದರು. ಶೆಡ್ನಲ್ಲಿ ಹಲ್ಲೆ ನಡೆಸುವಾಗ ಕೆಲವು ಆರೋಪಿಗಳು ಮೊಬೈಲ್ನಲ್ಲಿ ಫೋಟೊ ತೆಗೆದುಕೊಂಡಿದ್ದರು. ವಿಡಿಯೊ ಚಿತ್ರೀಕರಿಸಿಕೊಂಡಿದ್ದರು. ರೇಣುಕಸ್ವಾಮಿ ಮೃತಪಟ್ಟ ಮೇಲೆ ಮೊಬೈಲ್ ಶಾಪ್ಗೆ ತೆರಳಿ ಎಲ್ಲ ಫೋಟೊ ಹಾಗೂ ವಿಡಿಯೊ ಡಿಲಿಟ್ ಮಾಡಿಸಿದ್ದರು.