ಬುಧವಾರ ಮುಂಜಾನೆ, ಸಿಆರ್ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇ.ಡಿ, ದಾಳಿ ನಡೆಸಿತು. ನಾಗೇಂದ್ರ ಅವರ ಬೆಂಗಳೂರಿನ ನಿವಾಸದಲ್ಲೂ ಶೋಧ ನಡೆಯುತ್ತಿದೆ.
ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ಥ್ ನಿಯೋಜಿಸಲಾಗಿದೆ.