<p><strong>ಕೆನಡಾ</strong>: ಖಾಲಿಸ್ತಾನಿ ಭಯೋತ್ಪಾದಕ ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾ ಸರ್ಕಾರ ಒಟ್ಟಾವದಲ್ಲಿರುವ ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟನೆ ಮಾಡಿದೆ.</p><p>ಜೂನ್ನಲ್ಲಿ ಖಾಲಿಸ್ತಾನಿ ಭಯೋತ್ಪಾದಕ ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆಯಾಗಿತ್ತು. ‘ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್’ ಮುಖ್ಯಸ್ಥ ಪವನ್ ಕುಮಾರ್ ರೈ ಉಚ್ಚಾಟನೆಗೊಂಡ ಅಧಿಕಾರಿ ಎಂದು ಕೆನಡಾದ ಸುದ್ದಿಸಂಸ್ಥೆ ಸಿಬಿಸಿ ನ್ಯೂಸ್ ವರದಿ ಮಾಡಿದೆ.</p><p>‘ಖಾಲಿಸ್ತಾನಿ ಭಯೋತ್ಪಾದಕ ಹತ್ಯೆಯ ಹಿಂದೆ ಭಾರತ ಸರ್ಕಾರದ ಏಜೆಂಟರುಗಳ ಕೈವಾಡವಿದೆ ಎಂಬುವುದಕ್ಕೆ ನಮ್ಮ ಸರ್ಕಾರದ ಬಳಿ ಸಾಕ್ಷಿಗಳಿವೆ’ ಎಂದು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಸೋಮವಾರ ಮಧ್ಯಾಹ್ನ ನಡೆದ ಸಂಸತ್ ಅಧಿವೇಶನದಲ್ಲಿ ತಿಳಿಸಿದ್ದರು.</p><p><strong>ಓದಿ: <a href="https://www.prajavani.net/news/india-news/wanted-in-indiakhalistantiger-force-chief-shot-dead-in-canada-2341064">ಕೆನಡಾ: ಖಾಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಗುಂಡಿಕ್ಕಿ ಹತ್ಯೆ</a></strong></p><p>ಈ ಬಗ್ಗೆ ಹೇಳಿಕೆ ನೀಡಿರುವ ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ, ‘ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಲುವು ತಾಳಿದೆ. ಇಂದು ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕೆನಡಾದಿಂದ ಉಚ್ಚಾಟನೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.</p><p>ಮೋಸ್ಟ್ ವಾಂಟೆಡ್ ಟೆರರಿಸ್ಟ್ ಪಟ್ಟಿಯಲ್ಲಿದ್ದ ಖಾಲಿಸ್ತಾನಿ ಭಯೋತ್ಪಾದಕ ಹರ್ದಿಪ್ ಸಿಂಗ್ ನಿಜ್ಜರ್ನನ್ನು ಜೂನ್ 18ರಂದು ಕೆನಡಾದ ಸರ್ರೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಿಜ್ಜರ್ ಮೇಲೆ ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪವಿತ್ತು.</p><p><strong>ಓದಿ: <a href="https://www.prajavani.net/news/india-news/india-expels-canadian-diplomat-2486359">ಕೆನಡಾದ ರಾಜತಾಂತ್ರಿಕ ಅಧಿಕಾರಿ ಉಚ್ಚಾಟನೆ ಮಾಡಿದ ಭಾರತ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆನಡಾ</strong>: ಖಾಲಿಸ್ತಾನಿ ಭಯೋತ್ಪಾದಕ ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿರುವ ಕೆನಡಾ ಸರ್ಕಾರ ಒಟ್ಟಾವದಲ್ಲಿರುವ ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟನೆ ಮಾಡಿದೆ.</p><p>ಜೂನ್ನಲ್ಲಿ ಖಾಲಿಸ್ತಾನಿ ಭಯೋತ್ಪಾದಕ ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆಯಾಗಿತ್ತು. ‘ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್’ ಮುಖ್ಯಸ್ಥ ಪವನ್ ಕುಮಾರ್ ರೈ ಉಚ್ಚಾಟನೆಗೊಂಡ ಅಧಿಕಾರಿ ಎಂದು ಕೆನಡಾದ ಸುದ್ದಿಸಂಸ್ಥೆ ಸಿಬಿಸಿ ನ್ಯೂಸ್ ವರದಿ ಮಾಡಿದೆ.</p><p>‘ಖಾಲಿಸ್ತಾನಿ ಭಯೋತ್ಪಾದಕ ಹತ್ಯೆಯ ಹಿಂದೆ ಭಾರತ ಸರ್ಕಾರದ ಏಜೆಂಟರುಗಳ ಕೈವಾಡವಿದೆ ಎಂಬುವುದಕ್ಕೆ ನಮ್ಮ ಸರ್ಕಾರದ ಬಳಿ ಸಾಕ್ಷಿಗಳಿವೆ’ ಎಂದು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಸೋಮವಾರ ಮಧ್ಯಾಹ್ನ ನಡೆದ ಸಂಸತ್ ಅಧಿವೇಶನದಲ್ಲಿ ತಿಳಿಸಿದ್ದರು.</p><p><strong>ಓದಿ: <a href="https://www.prajavani.net/news/india-news/wanted-in-indiakhalistantiger-force-chief-shot-dead-in-canada-2341064">ಕೆನಡಾ: ಖಾಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಗುಂಡಿಕ್ಕಿ ಹತ್ಯೆ</a></strong></p><p>ಈ ಬಗ್ಗೆ ಹೇಳಿಕೆ ನೀಡಿರುವ ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ, ‘ಹರ್ದಿಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಲುವು ತಾಳಿದೆ. ಇಂದು ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕೆನಡಾದಿಂದ ಉಚ್ಚಾಟನೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.</p><p>ಮೋಸ್ಟ್ ವಾಂಟೆಡ್ ಟೆರರಿಸ್ಟ್ ಪಟ್ಟಿಯಲ್ಲಿದ್ದ ಖಾಲಿಸ್ತಾನಿ ಭಯೋತ್ಪಾದಕ ಹರ್ದಿಪ್ ಸಿಂಗ್ ನಿಜ್ಜರ್ನನ್ನು ಜೂನ್ 18ರಂದು ಕೆನಡಾದ ಸರ್ರೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಿಜ್ಜರ್ ಮೇಲೆ ಹಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪವಿತ್ತು.</p><p><strong>ಓದಿ: <a href="https://www.prajavani.net/news/india-news/india-expels-canadian-diplomat-2486359">ಕೆನಡಾದ ರಾಜತಾಂತ್ರಿಕ ಅಧಿಕಾರಿ ಉಚ್ಚಾಟನೆ ಮಾಡಿದ ಭಾರತ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>