<p><strong>ನವದೆಹಲಿ: </strong>ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಸದಸ್ಯರು ಮಂಗಳವಾರ ರಾಜ್ಯಸಭೆ ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದರು.</p>.<p>ರಾಜ್ಯಸಭೆಯ ಇಂದಿನ ಕಾರ್ಯಕ್ರಮಪಟ್ಟಿಯನ್ನು ರದ್ದುಗೊಳಿಸಿ, ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಎರಡು ತಿಂಗಳಿನಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತಾಗಿ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಆದರೆ ಸಭಾಧ್ಯಕ್ಷರಾದ ಎಂ.ವೆಂಕಯ್ಯನಾಯ್ಡು ಅವರು ಇದಕ್ಕೆ ಅನುಮತಿ ನೀಡಲಿಲ್ಲ.</p>.<p>ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಸದಸ್ಯರು ಕಲಾಪದಿಂದ ಹೊರ ನಡೆದರು.</p>.<p>267ರ ನಿಯಮದ ಪ್ರಕಾರ ದಿನದ ವ್ಯವಹಾರಗಳನ್ನು ರದ್ದುಗೊಳಿಸಿ, ರೈತರ ಪ್ರತಿಭಟನೆಯ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ನೋಟಿಸ್ ನೀಡಿದ್ದವು.</p>.<p>‘ನನಗೆ ಹಲವು ವಿರೋಧ ಪಕ್ಷಗಳ ನಾಯಕರಿಂದ ಈ ಸಂಬಂಧ ನೋಟಿಸ್ ಸಿಕ್ಕಿದೆ. ಆದರೆ ಸಂಸತ್ತಿನ ಉಭಯ ಸದನಗಳನ್ನುದ್ಧೇಶಿಸಿ ರಾಷ್ಟ್ರಪತಿಗಳು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಬಹುದು’ ಎಂದು ಸಭಾಧ್ಯಕ್ಷರು ಹೇಳಿದರು.</p>.<p>‘ಲೋಕಸಭೆಯಲ್ಲಿ ನಿಲುವಳಿಯ ಕುರಿತಂತೆ ಮಂಗಳವಾರ ಚರ್ಚೆ ಪ್ರಾರಂಭವಾಗಲಿದೆ. ರಾಜ್ಯಸಭೆಯಲ್ಲಿಬುಧವಾರ ಈ ಸಂಬಂಧ ಚರ್ಚೆ ನಡೆಸಲಿದೆ’ ಎಂದು ಅವರು ಹೇಳಿದರು.</p>.<p>‘ಕೃಷಿ ಕಾಯ್ದೆಗಳ ಕುರಿತಂತೆ ರೈತರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಇದು ಬಹಳ ಮಹತ್ವಪೂರ್ಣ ವಿಷಯ. ಹಾಗಾಗಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಬಹುದು’ ಎಂದು ವೆಂಕಯ್ಯನಾಯ್ಡು ಅವರು ತಿಳಿಸಿದರು. ಪ್ರತಿಪಕ್ಷಗಳ ಸದಸ್ಯರು ಇದನ್ನು ಒಪ್ಪದೆ ಸಭಾತ್ಯಾಗ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಸದಸ್ಯರು ಮಂಗಳವಾರ ರಾಜ್ಯಸಭೆ ಕಲಾಪ ಬಹಿಷ್ಕರಿಸಿ ಸಭಾತ್ಯಾಗ ಮಾಡಿದರು.</p>.<p>ರಾಜ್ಯಸಭೆಯ ಇಂದಿನ ಕಾರ್ಯಕ್ರಮಪಟ್ಟಿಯನ್ನು ರದ್ದುಗೊಳಿಸಿ, ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಎರಡು ತಿಂಗಳಿನಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತಾಗಿ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯಿಸಿವೆ. ಆದರೆ ಸಭಾಧ್ಯಕ್ಷರಾದ ಎಂ.ವೆಂಕಯ್ಯನಾಯ್ಡು ಅವರು ಇದಕ್ಕೆ ಅನುಮತಿ ನೀಡಲಿಲ್ಲ.</p>.<p>ಈ ಹಿನ್ನೆಲೆಯಲ್ಲಿ ಕಾಂಗ್ರೆಸ್, ಟಿಎಂಸಿ ಮತ್ತು ಡಿಎಂಕೆ ಪಕ್ಷಗಳ ಸದಸ್ಯರು ಕಲಾಪದಿಂದ ಹೊರ ನಡೆದರು.</p>.<p>267ರ ನಿಯಮದ ಪ್ರಕಾರ ದಿನದ ವ್ಯವಹಾರಗಳನ್ನು ರದ್ದುಗೊಳಿಸಿ, ರೈತರ ಪ್ರತಿಭಟನೆಯ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ನೋಟಿಸ್ ನೀಡಿದ್ದವು.</p>.<p>‘ನನಗೆ ಹಲವು ವಿರೋಧ ಪಕ್ಷಗಳ ನಾಯಕರಿಂದ ಈ ಸಂಬಂಧ ನೋಟಿಸ್ ಸಿಕ್ಕಿದೆ. ಆದರೆ ಸಂಸತ್ತಿನ ಉಭಯ ಸದನಗಳನ್ನುದ್ಧೇಶಿಸಿ ರಾಷ್ಟ್ರಪತಿಗಳು ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಬಹುದು’ ಎಂದು ಸಭಾಧ್ಯಕ್ಷರು ಹೇಳಿದರು.</p>.<p>‘ಲೋಕಸಭೆಯಲ್ಲಿ ನಿಲುವಳಿಯ ಕುರಿತಂತೆ ಮಂಗಳವಾರ ಚರ್ಚೆ ಪ್ರಾರಂಭವಾಗಲಿದೆ. ರಾಜ್ಯಸಭೆಯಲ್ಲಿಬುಧವಾರ ಈ ಸಂಬಂಧ ಚರ್ಚೆ ನಡೆಸಲಿದೆ’ ಎಂದು ಅವರು ಹೇಳಿದರು.</p>.<p>‘ಕೃಷಿ ಕಾಯ್ದೆಗಳ ಕುರಿತಂತೆ ರೈತರು ಮತ್ತು ಸರ್ಕಾರದ ನಡುವೆ ಹಲವು ಸುತ್ತಿನ ಚರ್ಚೆಗಳು ನಡೆದಿವೆ. ಇದು ಬಹಳ ಮಹತ್ವಪೂರ್ಣ ವಿಷಯ. ಹಾಗಾಗಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಈ ವಿಷಯವನ್ನು ಪ್ರಸ್ತಾಪಿಸಬಹುದು’ ಎಂದು ವೆಂಕಯ್ಯನಾಯ್ಡು ಅವರು ತಿಳಿಸಿದರು. ಪ್ರತಿಪಕ್ಷಗಳ ಸದಸ್ಯರು ಇದನ್ನು ಒಪ್ಪದೆ ಸಭಾತ್ಯಾಗ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>