‘ಸದ್ಯದ ಸನ್ನಿವೇಶದಲ್ಲಿ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ರಾಜ್ಯದ ವಿವಿಧ ಮಠಾಧೀಶರು ನನ್ನ ಬಗ್ಗೆ ತೋರಿಸಿದ ವಿಶೇಷ ಕಾಳಜಿಯ ಬಗ್ಗೆ ಧನ್ಯವಾದ ಹೇಳುತ್ತೇನೆ. ಇಡೀ ದೇಶದಲ್ಲಿ 75 ವರ್ಷ ಮೀರಿದ ಯಾರಿಗೂ ಬಿಜೆಪಿಯಲ್ಲಿ ಅಧಿಕಾರ ನೀಡಿಲ್ಲ. ಪ್ರಧಾನಿ ಮೋದಿ, ಅಮಿತ್ ಷಾ ಮತ್ತು ನಡ್ಡಾ ಅವರು ನನ್ನ ಮೇಲೆ ವಿಶೇಷ ಕಾಳಜಿ ತೋರಿಸಿ ಅಧಿಕಾರ ನೀಡಿದ್ದಾರೆ. ಇದೇ 26 ಕ್ಕೆ ಎರಡು ವರ್ಷ ಅಧಿಕಾರ ಪೂರೈಸುತ್ತೇನೆ. ಕೇಂದ್ರದ ನಾಯಕರು ನೀಡುವ ಸೂಚನೆ ಪಾಲಿಸಲು ಸಿದ್ಧ’ ಎಂದು ತಿಳಿಸಿದರು.