<p><strong>ಗಡ್ಚಿರೋಲಿ:</strong> ಛತ್ತೀಸಗಢ ಗಡಿ ಸಮೀಪದಲ್ಲಿರುವ ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯಲ್ಲಿ ಬುಧವಾರ ಪೊಲೀಸರು ಮತ್ತು ‘ಸಿ60’ ಕಮಾಂಡೊಗಳು ನಡೆಸಿದ ಎನ್ಕೌಂಟರ್ನಲ್ಲಿ 12 ನಕ್ಸಲರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. </p>.<p>ಈ ಮಹತ್ವದ ಕಾರ್ಯಾಚರಣೆ ನಡೆಸಿದ ‘ಸಿ60’ ಕಮಾಂಡೊಗಳು ಹಾಗೂ ಗಢಚಿರೋಲಿ ಪೊಲೀಸರಿಗೆ ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡಣವೀಸ್ ಅವರು ₹51 ಲಕ್ಷ ಬಹುಮಾನ ಘೋಷಿಸಿದ್ದಾರೆ ಎಂದು ಗಢಚಿರೋಲಿ ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಲ್ ತಿಳಿಸಿದರು. </p>.<p>‘ವಾಂಡೋಲಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಕ್ಸಲರು ಮತ್ತು ಸಿ60 ಕಮಾಂಡೊಗಳ ನಡುವೆ 6 ಗಂಟೆ ದೀರ್ಘ ಕಾಲದವರೆಗೆ ಭಾರಿ ಗುಂಡಿನ ಚಕಮಕಿ ನಡೆಯಿತು. ನಕ್ಸಲರ ಗುರುತು ಪತ್ತೆ ಮತ್ತು ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡಿರುವ ಎಸ್ಪಿ ಹಾಗೂ ‘ಸಿ60’ ಪಡೆಯ ಸೈನಿಕರಿಬ್ಬರು ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಅವರು ಹೇಳಿದರು. </p>.<p>ಘಟನೆ ನಡೆದ ಸ್ಥಳದಲ್ಲಿ 12 ನಕ್ಸಲರ ಮೃತದೇಹಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಸ್ಥಳದಲ್ಲಿದ್ದ 3 ಎಕೆ– 47, 2 ಐಎನ್ಎಸ್ಎಎಸ್ ರೈಫಲ್ಗಳು, ಕಾರ್ಬೈನ್ ಮತ್ತು ಎಸ್ಎಲ್ಆರ್ ಸೇರಿದಂತೆ 7 ವಿವಿಧ ಶಸ್ತ್ರಾಸ್ತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.</p>.<p>ಹತ್ಯೆಯಾದ ನಕ್ಸಲರ ಪೈಕಿ ಒಬ್ಬನನ್ನು ಟೀಟಾಗಢ ದಳದ ಉಸ್ತುವಾರಿ ಡಿವಿಸಿಎಂ ಲಕ್ಷ್ಮಣ ಅತ್ರಾಮ್ ಅಲಿಯಾಸ್ ವಿಶಾಲ್ ಅತ್ರಾಮ್ ಎಂದು ಗುರುತಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಡ್ಚಿರೋಲಿ:</strong> ಛತ್ತೀಸಗಢ ಗಡಿ ಸಮೀಪದಲ್ಲಿರುವ ಮಹಾರಾಷ್ಟ್ರದ ಗಢಚಿರೋಲಿ ಜಿಲ್ಲೆಯಲ್ಲಿ ಬುಧವಾರ ಪೊಲೀಸರು ಮತ್ತು ‘ಸಿ60’ ಕಮಾಂಡೊಗಳು ನಡೆಸಿದ ಎನ್ಕೌಂಟರ್ನಲ್ಲಿ 12 ನಕ್ಸಲರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು. </p>.<p>ಈ ಮಹತ್ವದ ಕಾರ್ಯಾಚರಣೆ ನಡೆಸಿದ ‘ಸಿ60’ ಕಮಾಂಡೊಗಳು ಹಾಗೂ ಗಢಚಿರೋಲಿ ಪೊಲೀಸರಿಗೆ ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡಣವೀಸ್ ಅವರು ₹51 ಲಕ್ಷ ಬಹುಮಾನ ಘೋಷಿಸಿದ್ದಾರೆ ಎಂದು ಗಢಚಿರೋಲಿ ಪೊಲೀಸ್ ವರಿಷ್ಠಾಧಿಕಾರಿ ನೀಲೋತ್ಪಲ್ ತಿಳಿಸಿದರು. </p>.<p>‘ವಾಂಡೋಲಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಕ್ಸಲರು ಮತ್ತು ಸಿ60 ಕಮಾಂಡೊಗಳ ನಡುವೆ 6 ಗಂಟೆ ದೀರ್ಘ ಕಾಲದವರೆಗೆ ಭಾರಿ ಗುಂಡಿನ ಚಕಮಕಿ ನಡೆಯಿತು. ನಕ್ಸಲರ ಗುರುತು ಪತ್ತೆ ಮತ್ತು ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡಿರುವ ಎಸ್ಪಿ ಹಾಗೂ ‘ಸಿ60’ ಪಡೆಯ ಸೈನಿಕರಿಬ್ಬರು ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ’ ಎಂದು ಅವರು ಹೇಳಿದರು. </p>.<p>ಘಟನೆ ನಡೆದ ಸ್ಥಳದಲ್ಲಿ 12 ನಕ್ಸಲರ ಮೃತದೇಹಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಸ್ಥಳದಲ್ಲಿದ್ದ 3 ಎಕೆ– 47, 2 ಐಎನ್ಎಸ್ಎಎಸ್ ರೈಫಲ್ಗಳು, ಕಾರ್ಬೈನ್ ಮತ್ತು ಎಸ್ಎಲ್ಆರ್ ಸೇರಿದಂತೆ 7 ವಿವಿಧ ಶಸ್ತ್ರಾಸ್ತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.</p>.<p>ಹತ್ಯೆಯಾದ ನಕ್ಸಲರ ಪೈಕಿ ಒಬ್ಬನನ್ನು ಟೀಟಾಗಢ ದಳದ ಉಸ್ತುವಾರಿ ಡಿವಿಸಿಎಂ ಲಕ್ಷ್ಮಣ ಅತ್ರಾಮ್ ಅಲಿಯಾಸ್ ವಿಶಾಲ್ ಅತ್ರಾಮ್ ಎಂದು ಗುರುತಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>