<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದ 51 ಜನರು ಮೃತಪಟ್ಟಿದ್ದಾರೆ. ಶಿಮ್ಲಾದಲ್ಲಿ ಭೂ ಕುಸಿತ ಸಂಭವಿಸಿದ ಎರಡು ಕಡೆಗಳಿಂದ 14 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ.</p><p>ಶಿಮ್ಲಾದ ದೇವಾಲಯದ ಅವಶೇಷಗಳಡಿ ಸಿಲುಕಿ ಏಳು ಜನರು ಸಮಾಧಿಯಾಗಿದ್ದಾರೆ. ಅವಶೇಷಗಳಡಿ ಇನ್ನಷ್ಟು ಜನರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯ ಸೋಮವಾರ ಭರದಿಂದ ಸಾಗಿತ್ತು.</p><p>ಮಂಡಿ ಜಿಲ್ಲೆಯಲ್ಲಿ ಮಳೆ ಸಂಬಂಧಿ ಅವಘಡಗಳಿಂದಾಗಿ 19 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅರಿಂದನ್ ಚೌಧರಿ ತಿಳಿಸಿದ್ದಾರೆ. ಸೋಲನ್ ಜಿಲ್ಲೆಯ ಜಾದೋನ್ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಒಂದೇ ಕುಟುಂಬದ ಏಳು ಜನರು ಸೇರಿ 11 ಜನರು ಅಸುನೀಗಿದ್ದಾರೆ.</p><p>ರಾಜ್ಯದಲ್ಲಿ ಭಾನುವಾರದಿಂದ ಸುರಿದ ಮಹಾಮಳೆಯು ಭಾರಿ ಹಾನಿ ಉಂಟುಮಾಡಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿ, ಪ್ರಮುಖ ರಸ್ತೆಗಳು ಹಾನಿಗೊಂಡಿದ್ದು, ಸಂಚಾರ ಬಂದ್ ಆಗಿದೆ. ಹಲವು ಮನೆಗಳು ನೆಲಸಮಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಶಿಮ್ಲಾದ ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯ ನೆಲಸಮಗೊಂಡಿದ್ದು, ಅವಶೇಷಗಳಡಿ ಇನ್ನಷ್ಟು ಜನರು ಸಿಲುಕಿರುವ ಶಂಕೆ ಇದೆ. ಶ್ರಾವಣದ ವಿಶೇಷ ಪೂಜೆ ಸಲ್ಲಿಸಲು ಭಕ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾಗಲೇ ಈ ದುರಂತ ಸಂಭವಿಸಿದೆ. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. </p><p>ಮಳೆಯಿಂದ ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಭೂಕುಸಿತವು ಫಗ್ಲಿ ಪ್ರದೇಶದಲ್ಲಿ ಸಂಭವಿಸಿದೆ. ಇದರಲ್ಲಿ ಹಲವು ಮನೆಗಳು ಮಣ್ಣು ಮತ್ತು ಕೆಸರಿನಡಿ ಹೂತುಹೋಗಿವೆ. ಐದು ಮಂದಿಯ ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದ್ದು, 17 ಜನರನ್ನು ರಕ್ಷಿಸಲಾಗಿದೆ ಎಂದು ಶಿಮ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ ತಿಳಿಸಿದ್ದಾರೆ.</p><p>ಹಲವು ಮಂದಿ ಸಮಾಧಿಯಾಗಿರುವ ಶಂಕೆ: ಸಮ್ಮರ್ ಹಿಲ್ ಮತ್ತು ಫಗ್ಲಿ ಪ್ರದೇಶಗಳಲ್ಲಿ ಸಂಭವಿಸಿರುವ ಭೂಕುಸಿತಗಳಲ್ಲಿ ಅನೇಕ ಜನರು ಸಮಾಧಿಯಾಗಿರುವ ಆತಂಕವಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ ಎಂದು ಶಿಮ್ಲಾ ಜಿಲ್ಲಾಧಿಕಾರಿ ಆದಿತ್ಯ ನೇಗಿ ತಿಳಿಸಿದ್ದಾರೆ.</p><p>ಹಮೀರ್ಪುರ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಮರಾಜ್ ಬೈರ್ವಾ ತಿಳಿಸಿದ್ದಾರೆ.</p><p>ಭಾನುವಾರ ರಾತ್ರಿ ಒಬ್ಬ ವ್ಯಕ್ತಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಮತ್ತೊಂದು ಘಟನೆಯಲ್ಲಿ ಮನೆ ಕುಸಿದು ಬಿದ್ದು ವೃದ್ಧೆಯೊಬ್ಬರು ಜೀವಂತ ಸಮಾಧಿಯಾಗಿದ್ದು, ಅವರ ಪುತ್ರನನ್ನು ರಕ್ಷಿಸಲಾಗಿದೆ. ಜಿಲ್ಲೆಯ ರಂಗಾಸ್ ಪ್ರದೇಶದಲ್ಲಿ ಭೂಕುಸಿತದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ನೂರಾರು ರಸ್ತೆಗಳು ಬಂದ್: ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಶಿಮ್ಲಾ–ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಶಿಮ್ಲಾ ಮತ್ತು ಸೋಲನ್ ಜಿಲ್ಲೆಗಳಿಗೆ ಅಗತ್ಯ ಸರಕುಗಳ ರವಾನೆಗೆ ತೊಡಕುಂಟಾಗಿದೆ.</p><p>ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಮಾಹಿತಿ ಪ್ರಕಾರ, ಮಂಡಿ ಜಿಲ್ಲೆಯೊಂದರಲ್ಲೇ 236, ಶಿಮ್ಲಾದಲ್ಲಿ 59 ಮತ್ತು ಬಿಲಾಸ್ಪುರ ಜಿಲ್ಲೆಯಲ್ಲಿ 40 ರಸ್ತೆಗಳು ಸೇರಿ ರಾಜ್ಯದಲ್ಲಿ 621 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. </p><p>ಶಾಲಾ– ಕಾಲೇಜುಗಳಿಗೆ ರಜೆ: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ‘ಕಳೆದ 24 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ –ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ’ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.</p><p>ಮಂಗಳವಾರ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದ್ದು, ಆಗಸ್ಟ್ 18ರವರೆಗೆ ರಾಜ್ಯದಲ್ಲಿ ಆರ್ದ್ರ ವಾತಾವರಣದ ಮುನ್ಸೂಚನೆ ನೀಡಿದೆ.</p> .<div><blockquote>ಅನೇಕ ಜನರು ಸಮಾಧಿಯಾಗಿದ್ದಾರೆ. ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯವು ಸಮರೋಪಾದಿಯಲ್ಲಿ ನಡೆಯುತ್ತಿದೆ. </blockquote><span class="attribution">ಸುಖ್ವಿಂದರ್ ಸಿಂಗ್ ಸುಖು, ಹಿಮಾಚಲಪ್ರದೇಶ ಮುಖ್ಯಮಂತ್ರಿ</span></div>. <p><strong>ಉತ್ತರಾಖಂಡದಲ್ಲಿ ಮೂವರ ಸಾವು</strong></p><p>ಡೆಹ್ರಾಡೂನ್ (ಪಿಟಿಐ): ಉತ್ತರಾಖಂಡದಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದು, ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಹಲವು ಕಟ್ಟಡಗಳು ನಾಶವಾಗಿವೆ. </p><p>ಬದರಿನಾಥ್, ಕೇದಾರನಾಥ ಮತ್ತು ಗಂಗೋತ್ರಿ ದೇಗುಲಗಳ ಮಾರ್ಗದ ರಾಷ್ಟ್ರೀಯ ಹೆದ್ದಾರಿಗಳು ಕುಸಿದು, ಮೂವರು ಸಾವನ್ನಪ್ಪಿದ್ದಾರೆ. ಐವರು ಕಾಣೆಯಾಗಿದ್ದಾರೆ.</p><p>ಹೆದ್ದಾರಿಗಳು ಹಾಳಾಗಿರುವುದರಿಂದ ಸಂಚಾರ ಸ್ಥಗಿತಗೊಳಿಸಲಾಗಿದೆ. ಮತ್ತಷ್ಟು ಭೂಕುಸಿತದ ಅಪಾಯ ಇರುವುದರಿಂದ ಎರಡು ದಿನಗಳ ಕಾಲ ಚಾರ್ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಸತತ ಮಳೆಯಿಂದಾಗಿ ಡೆಹ್ರಾಡೂನ್ನ ಹೊರವಲಯದಲ್ಲಿರುವ ಖಾಸಗಿ ರಕ್ಷಣಾ ತರಬೇತಿ ಅಕಾಡೆಮಿ ಕಟ್ಟಡ ಕೂಡ ಕುಸಿದಿದೆ. </p><p>ರಾಜ್ಯದಲ್ಲಿನ ಮಳೆ ಮತ್ತು ಹಾನಿ ಪರಿಸ್ಥಿತಿ ಪರಿಶೀಲಿಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.</p><p>ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವಾರ್ ಅವರು, ಕೇದಾರನಾಥದ ಬಳಿಯ ಲಿಂಚೋಲಿಯಲ್ಲಿನ ಶಿಬಿರದಲ್ಲಿ ಭೂಕುಸಿತ ಸಂಭವಿಸಿದೆ. ನೇಪಾಳದ 26 ವರ್ಷದ ಕಲು ಬಹದ್ದೂರ್ ಎಂಬುವವರು ಸಾವನ್ನಪ್ಪಿದ್ದಾರೆ. ಋಷಿಕೇಶದ ಶಿವಮಂದಿರ ಮತ್ತು ಮೀರಾನಗರ ಪ್ರದೇಶಗಳ ಬಳಿ ಹೊಳೆಗಳಲ್ಲಿ ಎರಡು ಶವಗಳು ಪತ್ತೆಯಾಗಿವೆ ಎಂದು ಋಷಿಕೇಶದ ಏಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೌರಿ ಜಿಲ್ಲೆಯ ಲಕ್ಷ್ಮಣಜುಲಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ನಾಲ್ಕೈದು ಜನರು ಕಾಣೆಯಾಗಿದ್ದಾರೆ. ಈ ಪ್ರದೇಶದ ರೆಸಾರ್ಟ್ನಲ್ಲಿ ಅವಶೇಷಗಳಡಿ ನಾಲ್ಕೈದು ಜನರು ಸಿಲುಕಿಕೊಂಡಿದ್ದಾರೆ ಎಂದು ಪೌರಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ವೇತಾ ಚೌಬೆ ತಿಳಿಸಿದರು.</p><p>ರಕ್ಷಣಾ ಮತ್ತು ಪರಿಹಾರ ತಂಡಗಳು ಸ್ಥಳ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ</strong>: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ ಮತ್ತು ಭೂಕುಸಿತದಿಂದ 51 ಜನರು ಮೃತಪಟ್ಟಿದ್ದಾರೆ. ಶಿಮ್ಲಾದಲ್ಲಿ ಭೂ ಕುಸಿತ ಸಂಭವಿಸಿದ ಎರಡು ಕಡೆಗಳಿಂದ 14 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ.</p><p>ಶಿಮ್ಲಾದ ದೇವಾಲಯದ ಅವಶೇಷಗಳಡಿ ಸಿಲುಕಿ ಏಳು ಜನರು ಸಮಾಧಿಯಾಗಿದ್ದಾರೆ. ಅವಶೇಷಗಳಡಿ ಇನ್ನಷ್ಟು ಜನರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯ ಸೋಮವಾರ ಭರದಿಂದ ಸಾಗಿತ್ತು.</p><p>ಮಂಡಿ ಜಿಲ್ಲೆಯಲ್ಲಿ ಮಳೆ ಸಂಬಂಧಿ ಅವಘಡಗಳಿಂದಾಗಿ 19 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಅರಿಂದನ್ ಚೌಧರಿ ತಿಳಿಸಿದ್ದಾರೆ. ಸೋಲನ್ ಜಿಲ್ಲೆಯ ಜಾದೋನ್ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಒಂದೇ ಕುಟುಂಬದ ಏಳು ಜನರು ಸೇರಿ 11 ಜನರು ಅಸುನೀಗಿದ್ದಾರೆ.</p><p>ರಾಜ್ಯದಲ್ಲಿ ಭಾನುವಾರದಿಂದ ಸುರಿದ ಮಹಾಮಳೆಯು ಭಾರಿ ಹಾನಿ ಉಂಟುಮಾಡಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿ, ಪ್ರಮುಖ ರಸ್ತೆಗಳು ಹಾನಿಗೊಂಡಿದ್ದು, ಸಂಚಾರ ಬಂದ್ ಆಗಿದೆ. ಹಲವು ಮನೆಗಳು ನೆಲಸಮಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಶಿಮ್ಲಾದ ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯ ನೆಲಸಮಗೊಂಡಿದ್ದು, ಅವಶೇಷಗಳಡಿ ಇನ್ನಷ್ಟು ಜನರು ಸಿಲುಕಿರುವ ಶಂಕೆ ಇದೆ. ಶ್ರಾವಣದ ವಿಶೇಷ ಪೂಜೆ ಸಲ್ಲಿಸಲು ಭಕ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾಗಲೇ ಈ ದುರಂತ ಸಂಭವಿಸಿದೆ. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. </p><p>ಮಳೆಯಿಂದ ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಭೂಕುಸಿತವು ಫಗ್ಲಿ ಪ್ರದೇಶದಲ್ಲಿ ಸಂಭವಿಸಿದೆ. ಇದರಲ್ಲಿ ಹಲವು ಮನೆಗಳು ಮಣ್ಣು ಮತ್ತು ಕೆಸರಿನಡಿ ಹೂತುಹೋಗಿವೆ. ಐದು ಮಂದಿಯ ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದ್ದು, 17 ಜನರನ್ನು ರಕ್ಷಿಸಲಾಗಿದೆ ಎಂದು ಶಿಮ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ್ ಕುಮಾರ್ ಗಾಂಧಿ ತಿಳಿಸಿದ್ದಾರೆ.</p><p>ಹಲವು ಮಂದಿ ಸಮಾಧಿಯಾಗಿರುವ ಶಂಕೆ: ಸಮ್ಮರ್ ಹಿಲ್ ಮತ್ತು ಫಗ್ಲಿ ಪ್ರದೇಶಗಳಲ್ಲಿ ಸಂಭವಿಸಿರುವ ಭೂಕುಸಿತಗಳಲ್ಲಿ ಅನೇಕ ಜನರು ಸಮಾಧಿಯಾಗಿರುವ ಆತಂಕವಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ ಎಂದು ಶಿಮ್ಲಾ ಜಿಲ್ಲಾಧಿಕಾರಿ ಆದಿತ್ಯ ನೇಗಿ ತಿಳಿಸಿದ್ದಾರೆ.</p><p>ಹಮೀರ್ಪುರ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಹೇಮರಾಜ್ ಬೈರ್ವಾ ತಿಳಿಸಿದ್ದಾರೆ.</p><p>ಭಾನುವಾರ ರಾತ್ರಿ ಒಬ್ಬ ವ್ಯಕ್ತಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಮತ್ತೊಂದು ಘಟನೆಯಲ್ಲಿ ಮನೆ ಕುಸಿದು ಬಿದ್ದು ವೃದ್ಧೆಯೊಬ್ಬರು ಜೀವಂತ ಸಮಾಧಿಯಾಗಿದ್ದು, ಅವರ ಪುತ್ರನನ್ನು ರಕ್ಷಿಸಲಾಗಿದೆ. ಜಿಲ್ಲೆಯ ರಂಗಾಸ್ ಪ್ರದೇಶದಲ್ಲಿ ಭೂಕುಸಿತದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.</p><p>ನೂರಾರು ರಸ್ತೆಗಳು ಬಂದ್: ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಶಿಮ್ಲಾ–ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಇದರಿಂದ ಶಿಮ್ಲಾ ಮತ್ತು ಸೋಲನ್ ಜಿಲ್ಲೆಗಳಿಗೆ ಅಗತ್ಯ ಸರಕುಗಳ ರವಾನೆಗೆ ತೊಡಕುಂಟಾಗಿದೆ.</p><p>ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಮಾಹಿತಿ ಪ್ರಕಾರ, ಮಂಡಿ ಜಿಲ್ಲೆಯೊಂದರಲ್ಲೇ 236, ಶಿಮ್ಲಾದಲ್ಲಿ 59 ಮತ್ತು ಬಿಲಾಸ್ಪುರ ಜಿಲ್ಲೆಯಲ್ಲಿ 40 ರಸ್ತೆಗಳು ಸೇರಿ ರಾಜ್ಯದಲ್ಲಿ 621 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. </p><p>ಶಾಲಾ– ಕಾಲೇಜುಗಳಿಗೆ ರಜೆ: ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿತ್ತು. ‘ಕಳೆದ 24 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ –ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ’ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.</p><p>ಮಂಗಳವಾರ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದ್ದು, ಆಗಸ್ಟ್ 18ರವರೆಗೆ ರಾಜ್ಯದಲ್ಲಿ ಆರ್ದ್ರ ವಾತಾವರಣದ ಮುನ್ಸೂಚನೆ ನೀಡಿದೆ.</p> .<div><blockquote>ಅನೇಕ ಜನರು ಸಮಾಧಿಯಾಗಿದ್ದಾರೆ. ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯವು ಸಮರೋಪಾದಿಯಲ್ಲಿ ನಡೆಯುತ್ತಿದೆ. </blockquote><span class="attribution">ಸುಖ್ವಿಂದರ್ ಸಿಂಗ್ ಸುಖು, ಹಿಮಾಚಲಪ್ರದೇಶ ಮುಖ್ಯಮಂತ್ರಿ</span></div>. <p><strong>ಉತ್ತರಾಖಂಡದಲ್ಲಿ ಮೂವರ ಸಾವು</strong></p><p>ಡೆಹ್ರಾಡೂನ್ (ಪಿಟಿಐ): ಉತ್ತರಾಖಂಡದಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದು, ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ. ಹಲವು ಕಟ್ಟಡಗಳು ನಾಶವಾಗಿವೆ. </p><p>ಬದರಿನಾಥ್, ಕೇದಾರನಾಥ ಮತ್ತು ಗಂಗೋತ್ರಿ ದೇಗುಲಗಳ ಮಾರ್ಗದ ರಾಷ್ಟ್ರೀಯ ಹೆದ್ದಾರಿಗಳು ಕುಸಿದು, ಮೂವರು ಸಾವನ್ನಪ್ಪಿದ್ದಾರೆ. ಐವರು ಕಾಣೆಯಾಗಿದ್ದಾರೆ.</p><p>ಹೆದ್ದಾರಿಗಳು ಹಾಳಾಗಿರುವುದರಿಂದ ಸಂಚಾರ ಸ್ಥಗಿತಗೊಳಿಸಲಾಗಿದೆ. ಮತ್ತಷ್ಟು ಭೂಕುಸಿತದ ಅಪಾಯ ಇರುವುದರಿಂದ ಎರಡು ದಿನಗಳ ಕಾಲ ಚಾರ್ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಸತತ ಮಳೆಯಿಂದಾಗಿ ಡೆಹ್ರಾಡೂನ್ನ ಹೊರವಲಯದಲ್ಲಿರುವ ಖಾಸಗಿ ರಕ್ಷಣಾ ತರಬೇತಿ ಅಕಾಡೆಮಿ ಕಟ್ಟಡ ಕೂಡ ಕುಸಿದಿದೆ. </p><p>ರಾಜ್ಯದಲ್ಲಿನ ಮಳೆ ಮತ್ತು ಹಾನಿ ಪರಿಸ್ಥಿತಿ ಪರಿಶೀಲಿಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.</p><p>ರುದ್ರಪ್ರಯಾಗ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ನಂದನ್ ಸಿಂಗ್ ರಾಜ್ವಾರ್ ಅವರು, ಕೇದಾರನಾಥದ ಬಳಿಯ ಲಿಂಚೋಲಿಯಲ್ಲಿನ ಶಿಬಿರದಲ್ಲಿ ಭೂಕುಸಿತ ಸಂಭವಿಸಿದೆ. ನೇಪಾಳದ 26 ವರ್ಷದ ಕಲು ಬಹದ್ದೂರ್ ಎಂಬುವವರು ಸಾವನ್ನಪ್ಪಿದ್ದಾರೆ. ಋಷಿಕೇಶದ ಶಿವಮಂದಿರ ಮತ್ತು ಮೀರಾನಗರ ಪ್ರದೇಶಗಳ ಬಳಿ ಹೊಳೆಗಳಲ್ಲಿ ಎರಡು ಶವಗಳು ಪತ್ತೆಯಾಗಿವೆ ಎಂದು ಋಷಿಕೇಶದ ಏಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಪೌರಿ ಜಿಲ್ಲೆಯ ಲಕ್ಷ್ಮಣಜುಲಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ನಾಲ್ಕೈದು ಜನರು ಕಾಣೆಯಾಗಿದ್ದಾರೆ. ಈ ಪ್ರದೇಶದ ರೆಸಾರ್ಟ್ನಲ್ಲಿ ಅವಶೇಷಗಳಡಿ ನಾಲ್ಕೈದು ಜನರು ಸಿಲುಕಿಕೊಂಡಿದ್ದಾರೆ ಎಂದು ಪೌರಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ವೇತಾ ಚೌಬೆ ತಿಳಿಸಿದರು.</p><p>ರಕ್ಷಣಾ ಮತ್ತು ಪರಿಹಾರ ತಂಡಗಳು ಸ್ಥಳ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಅವರು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>