<p><strong>ಭುವನೇಶ್ವರ</strong>: ಒಡಿಶಾದಲ್ಲಿ ಭಾನುವಾರ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತಗಳಲ್ಲಿ 7 ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ.</p><p>ಕಲಾಹಂಡಿ ಜಿಲ್ಲೆಯಲ್ಲಿ 50ಕ್ಕೂ ಅಧಿಕ ಮಂದಿಯನ್ನು ಹೊತ್ತು ಸಾಗುತ್ತಿದ್ದ ಪಿಕಪ್ ವಾಹನವು ರಸ್ತೆಯಲ್ಲಿ ಉರುಳಿಬಿದ್ದು ಇಬ್ಬರು ಮೃತಪಟ್ಟಿದ್ದಾರೆ. 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪಿಕಪ್ ವಾಹನವು ಜುನಾಘಡದಿಂದ ದಾಸಪುರಕ್ಕೆ ತೆರಳುತ್ತಿತ್ತು.</p><p>ಪಿಕಪ್ ವಾಹನ ಓವರ್ಲೋಡ್ ಆಗಿದ್ದೇ ಅವಘಡಕ್ಕೆ ಕಾರಣ ಎಂದು ಪೊಲೀಸ್ ಅಧಿಕಾರಿ ಶ್ವೇತಪದ್ಮಾ ಸೇಠ್ ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತರ ಕುಟುಂಬಕ್ಕೆ ಸಿಎಂ ನವೀನ್ ಪಟ್ನಾಯಕ್ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದಾರೆ.</p><p>ಇದಕ್ಕೂ ಮುನ್ನ, ಲಖನ್ಪುರದಲ್ಲಿ ಮತ್ತೊಂದು ಪಿಕಪ್ ವಾಹನವು ರಾಷ್ಟ್ರೀಯ ಹೆದ್ದಾರಿ 49ರಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 4 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.</p><p>ಮತ್ತೊಂದು ಅಪಘಾತದಲ್ಲಿ, ಭದ್ರಕ್ ಜಿಲ್ಲೆಯ ಅರಾಡಿ ಛಕ್ನಲ್ಲಿ ಪುರಿಯಿಂದ ಪ್ರಯಾಣಿಕರನ್ನು ಬಾಲೇಶ್ವರಕ್ಕೆ ಕೊಂಡೊಯ್ಯುತ್ತಿದ್ದ ವಾಹನವು ಟ್ರಕ್ಗೆ ಡಿಕ್ಕಿ ಹೊಡದ ಪರಿಣಾಮ ಒಬ್ಬರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಒಡಿಶಾದಲ್ಲಿ ಭಾನುವಾರ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತಗಳಲ್ಲಿ 7 ಮಂದಿ ಮೃತಪಟ್ಟಿದ್ದು, 40 ಮಂದಿ ಗಾಯಗೊಂಡಿದ್ದಾರೆ.</p><p>ಕಲಾಹಂಡಿ ಜಿಲ್ಲೆಯಲ್ಲಿ 50ಕ್ಕೂ ಅಧಿಕ ಮಂದಿಯನ್ನು ಹೊತ್ತು ಸಾಗುತ್ತಿದ್ದ ಪಿಕಪ್ ವಾಹನವು ರಸ್ತೆಯಲ್ಲಿ ಉರುಳಿಬಿದ್ದು ಇಬ್ಬರು ಮೃತಪಟ್ಟಿದ್ದಾರೆ. 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪಿಕಪ್ ವಾಹನವು ಜುನಾಘಡದಿಂದ ದಾಸಪುರಕ್ಕೆ ತೆರಳುತ್ತಿತ್ತು.</p><p>ಪಿಕಪ್ ವಾಹನ ಓವರ್ಲೋಡ್ ಆಗಿದ್ದೇ ಅವಘಡಕ್ಕೆ ಕಾರಣ ಎಂದು ಪೊಲೀಸ್ ಅಧಿಕಾರಿ ಶ್ವೇತಪದ್ಮಾ ಸೇಠ್ ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತರ ಕುಟುಂಬಕ್ಕೆ ಸಿಎಂ ನವೀನ್ ಪಟ್ನಾಯಕ್ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದಾರೆ.</p><p>ಇದಕ್ಕೂ ಮುನ್ನ, ಲಖನ್ಪುರದಲ್ಲಿ ಮತ್ತೊಂದು ಪಿಕಪ್ ವಾಹನವು ರಾಷ್ಟ್ರೀಯ ಹೆದ್ದಾರಿ 49ರಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ 4 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.</p><p>ಮತ್ತೊಂದು ಅಪಘಾತದಲ್ಲಿ, ಭದ್ರಕ್ ಜಿಲ್ಲೆಯ ಅರಾಡಿ ಛಕ್ನಲ್ಲಿ ಪುರಿಯಿಂದ ಪ್ರಯಾಣಿಕರನ್ನು ಬಾಲೇಶ್ವರಕ್ಕೆ ಕೊಂಡೊಯ್ಯುತ್ತಿದ್ದ ವಾಹನವು ಟ್ರಕ್ಗೆ ಡಿಕ್ಕಿ ಹೊಡದ ಪರಿಣಾಮ ಒಬ್ಬರು ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>