<p><strong>ನವದೆಹಲಿ:</strong> ಜನ್ಮದಿನಾಂಕ ನಿರ್ಧರಿಸುವುದಕ್ಕೆ ಸಂಬಂಧಿಸಿ ಆಧಾರ್ ಕಾರ್ಡ್ ಅಧಿಕೃತ ಪುರಾವೆಯಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ಜನ್ಮ ದಿನಾಂಕದ ಪುರಾವೆಗೆ ಸಂಬಂಧಿಸಿ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಹೊರಡಿಸಿರುವ ಸುತ್ತೋಲೆ ಹಾಗೂ ಸಂಬಂಧಪಟ್ಟ ಕಾಯ್ದೆಯಲ್ಲಿನ ಅವಕಾಶಗಳನ್ನು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ.</p>.<p>ಆಧಾರ್ ಕಾರ್ಡ್ ಅನ್ನು ಗುರುತಿನ ಪುರಾವೆಯಾಗಿ ಬಳಸಬಹುದು. ಇದು ಜನ್ಮದಿನಾಂಕದ ಅಧಿಕೃತ ಪುರಾವೆಯಲ್ಲ ಎಂದು ಯುಐಡಿಎಐ ತನ್ನ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಹಾಗೂ ಉಜ್ಜಲ್ ಭುಯಾಂನ್ ಅವರು ಇದ್ದ ನ್ಯಾಯಪೀಠ ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.</p>.<p>ರಸ್ತೆ ಅಪಘಾತದಲ್ಲಿ ಸಂಭವಿಸಿದ ಸಾವಿಗೆ ಸಂಬಂಧಿಸಿ ಆಧಾರ್ ಕಾರ್ಡ್ನಲ್ಲಿ ನಮೂದಿಸಿದ್ದ ಜನ್ಮದಿನಾಂಕವನ್ನು ಆಧಾರವನ್ನಾಗಿ ಪರಿಗಣಿಸಿ ಪರಿಹಾರ ಮೊತ್ತವನ್ನು ಕಡಿತ ಮಾಡಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಸರೋಜ್ ಮತ್ತು ಇತರರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಅಪಘಾತದಲ್ಲಿ ಸಂಭವಿಸಿದ ಸಾವಿಗೆ ಸಂಬಂಧಿಸಿ ಪರಿಹಾರ ಮೊತ್ತ ನಿಗದಿ ಮಾಡಲು ವರ್ಗಾವಣೆ ಪ್ರಮಾಣಪತ್ರವನ್ನೇ ಜನ್ಮದಿನಾಂಕ ದೃಢೀಕರಣಕ್ಕೆ ಆಧಾರವನ್ನಾಗಿ ಪರಿಗಣಿಸಿ ಮೋಟಾರು ಅಪಘಾತ ಕ್ಲೇಮುಗಳ ನ್ಯಾಯಮಂಡಳಿ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ.</p>.<p>ಪರಿಹಾರ ಮೊತ್ತವನ್ನು ₹9,22,336 ರಿಂದ ₹15 ಲಕ್ಷಕ್ಕೆ ಹೆಚ್ಚಿಸಿ ಹಾಗೂ ಬಡ್ಡಿದರವನ್ನು ಶೇ8ರಷ್ಟು ಎಂದು ನಿಗದಿ ಮಾಡಿ ಆದೇಶಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಜನ್ಮದಿನಾಂಕ ನಿರ್ಧರಿಸುವುದಕ್ಕೆ ಸಂಬಂಧಿಸಿ ಆಧಾರ್ ಕಾರ್ಡ್ ಅಧಿಕೃತ ಪುರಾವೆಯಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.</p>.<p>ಜನ್ಮ ದಿನಾಂಕದ ಪುರಾವೆಗೆ ಸಂಬಂಧಿಸಿ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಹೊರಡಿಸಿರುವ ಸುತ್ತೋಲೆ ಹಾಗೂ ಸಂಬಂಧಪಟ್ಟ ಕಾಯ್ದೆಯಲ್ಲಿನ ಅವಕಾಶಗಳನ್ನು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ.</p>.<p>ಆಧಾರ್ ಕಾರ್ಡ್ ಅನ್ನು ಗುರುತಿನ ಪುರಾವೆಯಾಗಿ ಬಳಸಬಹುದು. ಇದು ಜನ್ಮದಿನಾಂಕದ ಅಧಿಕೃತ ಪುರಾವೆಯಲ್ಲ ಎಂದು ಯುಐಡಿಎಐ ತನ್ನ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದೆ.</p>.<p>ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಹಾಗೂ ಉಜ್ಜಲ್ ಭುಯಾಂನ್ ಅವರು ಇದ್ದ ನ್ಯಾಯಪೀಠ ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.</p>.<p>ರಸ್ತೆ ಅಪಘಾತದಲ್ಲಿ ಸಂಭವಿಸಿದ ಸಾವಿಗೆ ಸಂಬಂಧಿಸಿ ಆಧಾರ್ ಕಾರ್ಡ್ನಲ್ಲಿ ನಮೂದಿಸಿದ್ದ ಜನ್ಮದಿನಾಂಕವನ್ನು ಆಧಾರವನ್ನಾಗಿ ಪರಿಗಣಿಸಿ ಪರಿಹಾರ ಮೊತ್ತವನ್ನು ಕಡಿತ ಮಾಡಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಸರೋಜ್ ಮತ್ತು ಇತರರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.</p>.<p>ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಅಪಘಾತದಲ್ಲಿ ಸಂಭವಿಸಿದ ಸಾವಿಗೆ ಸಂಬಂಧಿಸಿ ಪರಿಹಾರ ಮೊತ್ತ ನಿಗದಿ ಮಾಡಲು ವರ್ಗಾವಣೆ ಪ್ರಮಾಣಪತ್ರವನ್ನೇ ಜನ್ಮದಿನಾಂಕ ದೃಢೀಕರಣಕ್ಕೆ ಆಧಾರವನ್ನಾಗಿ ಪರಿಗಣಿಸಿ ಮೋಟಾರು ಅಪಘಾತ ಕ್ಲೇಮುಗಳ ನ್ಯಾಯಮಂಡಳಿ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿದೆ.</p>.<p>ಪರಿಹಾರ ಮೊತ್ತವನ್ನು ₹9,22,336 ರಿಂದ ₹15 ಲಕ್ಷಕ್ಕೆ ಹೆಚ್ಚಿಸಿ ಹಾಗೂ ಬಡ್ಡಿದರವನ್ನು ಶೇ8ರಷ್ಟು ಎಂದು ನಿಗದಿ ಮಾಡಿ ಆದೇಶಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>