<p><strong>ನವದೆಹಲಿ</strong>: ಆಮ್ ಆದ್ಮಿ ಪಕ್ಷದ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆಗೆ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿರುವ ಎಎಪಿ, ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ ಎಂದಿದೆ. </p><p>ಪಶ್ಚಿಮ ದೆಹಲಿಯ ವಿಕಾಸಪುರಿಯಲ್ಲಿ ಪಾದಯಾತ್ರೆ ನಡೆಸುತ್ತಿರುವ ವೇಳೆ ಕೇಜ್ರಿವಾಲ್ ಅವರ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದರು ಎಂದು ಶುಕ್ರವಾರ ಎಎಪಿ ನಾಯಕರು ಆರೋಪಿಸಿದ್ದರು.</p><p>ದಾಳಿ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಎಎಪಿ ರಾಜ್ಯ ಸಭಾ ಸಂಸದ ಸಂಜಯ್ ಸಿಂಗ್, ‘ಘಟನೆಯಲ್ಲಿ ಪೊಲೀಸರು ಭಾಗಿಯಾಗಿರುವುದು ಕೇಜ್ರಿವಾಲ್ ಅವರ ಹತ್ಯೆಗೆ ಪಿತೂರಿ ನಡೆಯುತ್ತಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಕೇಜ್ರಿವಾಲ್ ಅವರ ಜೀವಕ್ಕೆ ಬಿಜೆಪಿ ದೊಡ್ಡ ಶತ್ರುವಾಗಿದೆ’ ಎಂದು ದೂರಿದರು.</p><p>ಸಿಂಗ್ ಅವರ ಆರೋಪದ ಬಗ್ಗೆ ಪೊಲೀಸರಿಂದಾಗಲಿ, ಬಿಜೆಪಿಯಿಂದಾಗಲಿ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.</p><p>‘ವಿಕಾಸಪುರಿ ಘಟನೆಯ ಹೊರತಾಗಿಯೂ ಕೇಜ್ರಿವಾಲ್ ಅವರು ನಿಗದಿಯಂತೆ ಪಾದಯಾತ್ರೆ ಮುಂದುವರಿಸಲಿದ್ದಾರೆ’ ಎಂದು ಸಿಂಗ್ ತಿಳಿಸಿದರು.</p><p>ಘಟನೆಯ ಬಗ್ಗೆ ಎಎಪಿ ನಾಯಕರು ಏಕೆ ದೂರು ದಾಖಲಿಸಲಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ಪೊಲೀಸರು ನಿಷ್ಪಕ್ಷಪಾತಿಗಳಾಗಿದ್ದರೆ ಘಟನೆಯೇ ನಡೆಯುತ್ತಿರಲಿಲ್ಲ. ಬಿಜೆಪಿಯ ಯುವ ಮೋರ್ಚಾಗೆ ಸೇರಿದ ದಾಳಿಕೋರರನ್ನು ತಡೆಯಲು ಪೊಲೀಸ್ ಅಧಿಕಾರಿಗಳು ಏನು ಮಾಡಿರಲಿಲ್ಲ’ ಎಂದು ಹೇಳಿದರು.</p><p>‘ಕೇಜ್ರಿವಾಲ್ ಅವರು ಯಾರ ಮುಂದೆಯೂ ತಲೆ ಬಾಗುವುದಿಲ್ಲ. ದೆಹಲಿ ಜನರಿಗಾಗಿ ತಮ್ಮ ಹೋರಾಟವನ್ನು ಮುಂದುವರಿಸಲಿದ್ದಾರೆ. ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ’ ಎಂದು ಹೇಳಿದರು.</p><p>‘ಕೇಜ್ರಿವಾಲ್ ಅವರಿಗೆ ಸಣ್ಣ ಗಾಯವಾದರೂ ದೆಹಲಿ ಜನ ಬಿಜೆಪಿಯ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುತ್ತಾರೆ’ ಎಂದರು.</p><p>ವಿಕಾಸಪುರಿ ಘಟನೆ ಕುರಿತಂತೆ ಎಎಪಿ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ ನಾಯಕರು, ‘ಕಲುಷಿತ ನೀರು ಸರಬರಾಜು ಮಾಡಿದ್ದಕ್ಕಾಗಿ ಸ್ಥಳೀಯರಿಂದ ಪ್ರತಿಭಟನೆ ಎದುರಿಸಿದ್ದರು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಮ್ ಆದ್ಮಿ ಪಕ್ಷದ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆಗೆ ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿರುವ ಎಎಪಿ, ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ ಎಂದಿದೆ. </p><p>ಪಶ್ಚಿಮ ದೆಹಲಿಯ ವಿಕಾಸಪುರಿಯಲ್ಲಿ ಪಾದಯಾತ್ರೆ ನಡೆಸುತ್ತಿರುವ ವೇಳೆ ಕೇಜ್ರಿವಾಲ್ ಅವರ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದರು ಎಂದು ಶುಕ್ರವಾರ ಎಎಪಿ ನಾಯಕರು ಆರೋಪಿಸಿದ್ದರು.</p><p>ದಾಳಿ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಎಎಪಿ ರಾಜ್ಯ ಸಭಾ ಸಂಸದ ಸಂಜಯ್ ಸಿಂಗ್, ‘ಘಟನೆಯಲ್ಲಿ ಪೊಲೀಸರು ಭಾಗಿಯಾಗಿರುವುದು ಕೇಜ್ರಿವಾಲ್ ಅವರ ಹತ್ಯೆಗೆ ಪಿತೂರಿ ನಡೆಯುತ್ತಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಕೇಜ್ರಿವಾಲ್ ಅವರ ಜೀವಕ್ಕೆ ಬಿಜೆಪಿ ದೊಡ್ಡ ಶತ್ರುವಾಗಿದೆ’ ಎಂದು ದೂರಿದರು.</p><p>ಸಿಂಗ್ ಅವರ ಆರೋಪದ ಬಗ್ಗೆ ಪೊಲೀಸರಿಂದಾಗಲಿ, ಬಿಜೆಪಿಯಿಂದಾಗಲಿ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.</p><p>‘ವಿಕಾಸಪುರಿ ಘಟನೆಯ ಹೊರತಾಗಿಯೂ ಕೇಜ್ರಿವಾಲ್ ಅವರು ನಿಗದಿಯಂತೆ ಪಾದಯಾತ್ರೆ ಮುಂದುವರಿಸಲಿದ್ದಾರೆ’ ಎಂದು ಸಿಂಗ್ ತಿಳಿಸಿದರು.</p><p>ಘಟನೆಯ ಬಗ್ಗೆ ಎಎಪಿ ನಾಯಕರು ಏಕೆ ದೂರು ದಾಖಲಿಸಲಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ, ‘ಪೊಲೀಸರು ನಿಷ್ಪಕ್ಷಪಾತಿಗಳಾಗಿದ್ದರೆ ಘಟನೆಯೇ ನಡೆಯುತ್ತಿರಲಿಲ್ಲ. ಬಿಜೆಪಿಯ ಯುವ ಮೋರ್ಚಾಗೆ ಸೇರಿದ ದಾಳಿಕೋರರನ್ನು ತಡೆಯಲು ಪೊಲೀಸ್ ಅಧಿಕಾರಿಗಳು ಏನು ಮಾಡಿರಲಿಲ್ಲ’ ಎಂದು ಹೇಳಿದರು.</p><p>‘ಕೇಜ್ರಿವಾಲ್ ಅವರು ಯಾರ ಮುಂದೆಯೂ ತಲೆ ಬಾಗುವುದಿಲ್ಲ. ದೆಹಲಿ ಜನರಿಗಾಗಿ ತಮ್ಮ ಹೋರಾಟವನ್ನು ಮುಂದುವರಿಸಲಿದ್ದಾರೆ. ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ’ ಎಂದು ಹೇಳಿದರು.</p><p>‘ಕೇಜ್ರಿವಾಲ್ ಅವರಿಗೆ ಸಣ್ಣ ಗಾಯವಾದರೂ ದೆಹಲಿ ಜನ ಬಿಜೆಪಿಯ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುತ್ತಾರೆ’ ಎಂದರು.</p><p>ವಿಕಾಸಪುರಿ ಘಟನೆ ಕುರಿತಂತೆ ಎಎಪಿ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ ನಾಯಕರು, ‘ಕಲುಷಿತ ನೀರು ಸರಬರಾಜು ಮಾಡಿದ್ದಕ್ಕಾಗಿ ಸ್ಥಳೀಯರಿಂದ ಪ್ರತಿಭಟನೆ ಎದುರಿಸಿದ್ದರು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>