ಎಎಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಜಮ್ಮು (ಪಿಟಿಐ): ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ಬಂಧನ ವಿರೋಧಿಸಿ ಇಲ್ಲಿನ ಬಿಜೆಪಿ ಕಚೇರಿ ಬಳಿ ಎಎಪಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು. ಈ ವೇಳೆ 20ಕ್ಕೂ ಹೆಚ್ಚು ಎಎಪಿಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಕೇಜ್ರಿವಾಲ್ ಬಂಧನ ವಿರೋಧಿಸಿ ರಾಷ್ಟ್ರದಾದ್ಯಂತ ಎಎಪಿ ಹಮ್ಮಿಕೊಂಡ ಪ್ರತಿಭಟನೆ ಭಾಗವಾಗಿ ಜಮ್ಮುವಿನ ತ್ರಿಕೂಟ ನಗರದಲ್ಲಿ ಪಕ್ಷದ ಮುಖಂಡ ಓಂ ಪ್ರಕಾಶ್ ಖಜೂರಿಯಾ ನೇತೃತ್ವದಲ್ಲಿ ಎಎಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಕಾರ್ಯಕರ್ತರು ಮೆರವಣಿಗೆ ಮೂಲಕ ಬಿಜೆಪಿ ಕಚೇರಿಯತ್ತ ತೆರಳಲು ಯತ್ನಿಸಿದರು. ಆಗ ಪೊಲೀಸರು ಎಎಪಿ ಕಾರ್ಯಕರ್ತರನ್ನು ತಡೆದರು.