<p><strong>ಚಂಡೀಗಢ:</strong> ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷವು (ಎಎಪಿ) ‘ಕೇಜ್ರೀವಾಲ್ ಗ್ಯಾರಂಟಿ’ಗಳ ಅನುಷ್ಠಾನದ ಭರವಸೆಯನ್ನು ನೀಡಿದೆ. </p>.<p>ಗೃಹ ಸಂಪರ್ಕಗಳಿಗೆ ಉಚಿತ ವಿದ್ಯುತ್, ಮೊಹಲ್ಲಾ ಕ್ಲಿನಿಕ್ಗಳನ್ನು ಸ್ಥಾಪಿಸಿ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ನೀಡುವುದು, ಉಚಿತ ಶಿಕ್ಷಣ, ಪ್ರತಿಯೊಬ್ಬ ಮಹಿಳೆಗೆ ಮಾಸಿಕ ₹1000 ನಗದು ನೆರವು, ಯುವಜನರಿಗೆ ಉದ್ಯೋಗಾವಕಾಶ ಸೃಷ್ಟಿಸುವ ‘ಗ್ಯಾರಂಟಿ’ಯನ್ನು ಪ್ರಸ್ತಾಪಿಸಿದೆ.</p>.<p>ದೆಹಲಿ ಸಿ.ಎಂ ಅರವಿಂದ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಶನಿವಾರ ಇಲ್ಲಿ ಗ್ಯಾರಂಟಿ ಭರವಸೆಗಳನ್ನು ಪ್ರಕಟಿಸಿದರು. ಹರಿಯಾಣದಲ್ಲಿ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ.</p>.<p>ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ಎಎಪಿಯ ಹಿರಿಯ ನಾಯಕರಾದ ಸಂಜಯ್ ಸಿಂಗ್, ಸಂದೀಪ್ ಪಾಠಕ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್ ಅವರು, ಎಎಪಿ ಸ್ವಬಲದಿಂದಲೇ ಹರಿಯಾಣದಲ್ಲಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಗ್ನಿಪಥ್ ಸೇರಿದಂತೆ ಹಲವು ಯೋಜನೆ ಉಲ್ಲೇಖಿಸಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ಬಿಜೆಪಿ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಆದರೆ ಎಎಪಿ ಗ್ಯಾರಂಟಿಗಳನ್ನು ನೀಡುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ:</strong> ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷವು (ಎಎಪಿ) ‘ಕೇಜ್ರೀವಾಲ್ ಗ್ಯಾರಂಟಿ’ಗಳ ಅನುಷ್ಠಾನದ ಭರವಸೆಯನ್ನು ನೀಡಿದೆ. </p>.<p>ಗೃಹ ಸಂಪರ್ಕಗಳಿಗೆ ಉಚಿತ ವಿದ್ಯುತ್, ಮೊಹಲ್ಲಾ ಕ್ಲಿನಿಕ್ಗಳನ್ನು ಸ್ಥಾಪಿಸಿ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ನೀಡುವುದು, ಉಚಿತ ಶಿಕ್ಷಣ, ಪ್ರತಿಯೊಬ್ಬ ಮಹಿಳೆಗೆ ಮಾಸಿಕ ₹1000 ನಗದು ನೆರವು, ಯುವಜನರಿಗೆ ಉದ್ಯೋಗಾವಕಾಶ ಸೃಷ್ಟಿಸುವ ‘ಗ್ಯಾರಂಟಿ’ಯನ್ನು ಪ್ರಸ್ತಾಪಿಸಿದೆ.</p>.<p>ದೆಹಲಿ ಸಿ.ಎಂ ಅರವಿಂದ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಶನಿವಾರ ಇಲ್ಲಿ ಗ್ಯಾರಂಟಿ ಭರವಸೆಗಳನ್ನು ಪ್ರಕಟಿಸಿದರು. ಹರಿಯಾಣದಲ್ಲಿ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ.</p>.<p>ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ಎಎಪಿಯ ಹಿರಿಯ ನಾಯಕರಾದ ಸಂಜಯ್ ಸಿಂಗ್, ಸಂದೀಪ್ ಪಾಠಕ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್ ಅವರು, ಎಎಪಿ ಸ್ವಬಲದಿಂದಲೇ ಹರಿಯಾಣದಲ್ಲಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಗ್ನಿಪಥ್ ಸೇರಿದಂತೆ ಹಲವು ಯೋಜನೆ ಉಲ್ಲೇಖಿಸಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>‘ಬಿಜೆಪಿ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಆದರೆ ಎಎಪಿ ಗ್ಯಾರಂಟಿಗಳನ್ನು ನೀಡುತ್ತಿದೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>